ಪ್ರತಿ ಹಳ್ಳಿಗೂ ಕೆಎಸ್‍ಆರ್‍ಟಿಸಿ ಬಸ್ ಬಿಡದಿದ್ದರೇ ಬೃಹತ್ ಪ್ರತಿಭಟನೆ

ಜಗಳೂರು :

     ಪಟ್ಟಣದಲ್ಲಿ ಶೀಘ್ರವೇ ಕೆಎಸ್‍ಆರ್‍ಟಿಸಿ ಬಸ್ ಡಿಪೋಗೆ ಗುದ್ದಲಿ ಪೂಜೆ ಮಾಡುವ ಮೂಲಕ ತಾಲೂಕಿನ ಪ್ರತಿ ಹಳ್ಳಿಗೂ ಕೆಎಸ್‍ಆರ್‍ಟಿಸಿ ಬಸ್ ಬಿಡದಿದ್ದರೇ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

      ಪಟ್ಟಣದ ವಿದ್ಯಾನಗರದಲ್ಲಿರುವ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ತಾಲೂಕಿನಲ್ಲಿ ವಿದ್ಯಾರ್ಥಿಗಳ ಸಂಘಟನೆ ಹಾಗೂ ವಿವಿಧ ಪ್ರಗತಿ ಪರ ಹೋರಾಟದ ಫಲವಾಗಿ ತಾಲೂಕಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಬಿಡಲಾಗಿದೆ. ಆದರೆ ಪಟ್ಟಣದಲ್ಲಿ ಡಿಪೋ ನಿರ್ಮಾಣ ಮಾಡಲು ಕಳೆದೆರಡು ತಿಂಗಳ ಹಿಂದೆ ಶಾಸಕರು, ಅಧಿಕಾರಿಗಳು 3 ಕಡೆ ಜಾಗವನ್ನು ಪರಿಶೀಲನೆ ನಡೆಸಿದ್ದು, ಇದುವರೆಗೂ ಡಿಪೋ ಜಾಗವನ್ನು ಅಧಿಕೃತಗೊಳಿಸಿಲ್ಲ ಎಂದು ಆರೋಪಿಸಿದರು.

      ತಾಲೂಕಿನಲ್ಲಿ ಬಸ್‍ಗಳನ್ನೇ ಕಾಣದ ಗ್ರಾಮಗಳಿದ್ದು ಅಂತಹ ಗ್ರಾಮಗಳಿಗೆ ಶೀಘ್ರವೇ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ಕ್ರಮ ಕೈಗೊಳ್ಳಬೇಕು ಎಂದರು.ಇತ್ತೀಚೆಗೆ ಸರ್ಕಾರಿ ಬಸ್ ಚಾಲಕ ಹಾಗೂ ಕಂಡಾಕ್ಟರ್ ಮೇಲೆ ಖಾಸಗಿ ಬಸ್‍ನವರು ಹಲ್ಲೆ ನಡೆಸಿದ್ದು, ಸಂಬಂಧ ಪಟ್ಟ ಇಲಾಖೆಯವರು ಸರ್ಕಾರಿ ಬಸ್‍ನವರು ಸೂಕ್ತ ಭದ್ರತೆ ನೀಡಬೇಕು.ಸುದ್ದಿಗೋಷ್ಠಿಯಲ್ಲಿ ಎಸ್‍ಎಫ್‍ಐ ತಾಲೂಕು ಅಧ್ಯಕ್ಷ ಆನಂತ್ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link