ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ

ಗುಬ್ಬಿ

       ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿಗೆ ಅನುಧಾನ ಬಿಡುಗಡೆಯಾಗದ ಕಾರಣ ಜಿಲ್ಲಾ ಪಂಚಾಯತಿಗೆ ಸರಕಾರದಿಂದ ಹೆಚ್ಚು ಅನುದಾನ ನೀಡುತ್ತಿಲ್ಲ. ಇದರಿಂದ ಗ್ರಾಮೀಣ ಜನರ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಸದಸ್ಯೆ ಗಾಯತ್ರಿನಾಗರಾಜು ತಿಳಿಸಿದರು.

        ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದಲ್ಲಿ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಅಗತ್ಯ ಮೂಲಭೂತ ಸೌಲಭ್ಯಗಳಾದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಸುಸಜ್ಜಿತವಾದ ಚರಂಡಿಗಳ ನಿರ್ಮಾಣ ಸೇರಿದಂತೆ ಕುಡಿಯುವ ನೀರು ಮತ್ತು ಗ್ರಾಮ ನೈರ್ಮಲ್ಯತೆಗೆ ಅನುದಾನದ ಅವಶ್ಯಕತೆ ಇದ್ದು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವತ್ತ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದರು.

         ಕಲ್ಲೂರು ಮತ್ತು ಸಿ.ಎಸ್.ಪುರ ವ್ಯಾಪ್ತಿಯ ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಬೇಕಾಗಿದ್ದು, ಪ್ರಸ್ತುತ ಸರ್ಕಾರ ನೀಡುತ್ತಿರುವ ಅತ್ಯಲ್ಪ ಅನುದಾಣ ಸಾಕಾಗುತ್ತಿಲ್ಲ. ಆದ್ದರಿಂದ ಅಗತ್ಯವಿರುವ ಅನುದಾನವನ್ನು ಸರ್ಕಾರ ತ್ವರಿತವಾಗಿ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ ಅವರು, ಸರಕಾರದಿಂದ ವಿಶೇಷ ಅನುದಾನ ತಂದು ನಮ್ಮ ವ್ಯಾಪ್ತಿಯಲ್ಲಿ ಸುಮಾರು 7 ಕೋಟಿಯಷ್ಟು ಅನುದಾನದಲ್ಲಿ ಅಭಿವೃದ್ಧಿ ಕೆಲಸ ಮಾಡಿಸಲಾಗುತ್ತಿದೆ.

          ಅಲ್ಲದೆ ಶಾಸಕರಾದ ಮಸಾಲೆ ಜಯರಾಂರವರು ಸಹ ಅವರ ಅನುದಾನವನ್ನು ಸಹ ನಮ್ಮ ವ್ಯಾಪ್ತಿಗೆ ಹೆಚ್ಚು ನೀಡುತ್ತಿರುವುದರಿಂದ ಈ ಭಾಗದಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿದೆ. ಮುಂದಿನ ದಿನದಲ್ಲಿ ಹಲವು ಯೋಜನೆಗಳನ್ನು ಇಲ್ಲಿನ ಗ್ರಾಮಗಳಿಗೆ ತಂದು ಅಭಿವೃದ್ಧಿ ಮಾಡುವ ಕೆಲಸ ಮಾಡಲಾಗುತ್ತದೆ ಎಂದರು.

          ತಾಲ್ಲೂಕು ಪಂಚಾಯ್ತಿ ಸದಸ್ಯ ಭಾನುಪ್ರಕಾಶ್ ಮಾತನಾಡಿ ಗ್ರಾಮೀಣ ರಸ್ತೆ ಮತ್ತು ಚರಂಡಿಗಳ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯ್ತಿ ಸದಸ್ಯರು ವಿಶೇಷ ಅನುದಾನ ಬಿಡುಗಡೆ ಮಾಡಿಸಿರುವುದು ಸ್ವಾಗತಾರ್ಹವಾದುದಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದ್ದಾರೆ ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾಲಕ್ಷ್ಮಿ, ಗ್ರಾ.ಪಂ ಉಪಾಧ್ಯಕ್ಷ ಪಾಂಡುರಂಗಯ್ಯ, ಸದಸ್ಯ ಯಧುಕುಮಾರ್, ವಿ.ಎಸ್.ಎಸ್‍ಎನ್ ಅಧ್ಯಕ್ಷ ಸೋಮಶೇಖರಯ್ಯ, ಸದಸ್ಯ ನಾರಾಯಣ್, ಮುಖಂಡರಾದ ನಾಗರಾಜು, ಗಂಗಾಧರ್, ಇಡಗೂರು ರವಿ, ಸದಾಶಿವಕುಮಾರ್, ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link