ಜ.21ರಂದುಸರಳವಾಗಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚಜರಣೆ ; ಪ್ಯಾಟಿ ಬಸಣ್ಣ

ಹರಿಹರ:

       ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಪ್ರತಿವರ್ಷ ವಿೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿತ್ತು, ಆದರೆ ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಹರಿಹರ ತಾಲ್ಲೂಕು ಗಂಗಾಮತ ಸಮಾಜದ ಅಧ್ಯಕ್ಷ ಪ್ಯಾಟಿ ಬಸಣ್ಣ ಹೇಳಿದರು.

       ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜ. 21ರಂದು ನಡೆಯುವ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಣೆಮಾಡಲಾಗುದು ಎಂದರು. ಇತ್ತೀಚೆಗೆ ಹಾವೇರಿ ಜಿಲ್ಲೆಯ ನರಸೀಪುರದಲ್ಲಿ ಒಂದು ವಾರದ ಹಿಂದೆ ಅತ್ಯಂತ ವಿಜೃಂಭಣೆಯಿಂದ ನಡೆದ ಶರಣ ಸಂಸ್ಕೃತಿ ಉತ್ಸವ ಮತ್ತು ನೂತನ ರಥೋತ್ಸವದ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಹಳಷ್ಟು ಜನರು ಭಾಗಿಯಾಗಿದ್ದರು.

          ಹಾಗೂ ಶ್ರೀಗಳ ಆಗ್ರಹದ ಮೇರೆಗೆ ದಾವಣಗೆರೆ ಜಿಲ್ಲೆಯಿಂದ ಉತ್ಸವಕ್ಕೆ ಊಟದ ವ್ಯವಸ್ಥೆಯನ್ನು ಮಾಡಿದ ಹಿನ್ನೆಲೆಯಲ್ಲಿ ಸಮಾಜದ ಬಾಂಧವರಿಗೆ ಇನ್ನೂ ಹೆಚ್ಚಿನ ಹೊರೆ ಆಗಬಾರದು ಎನ್ನುವ ನಿಲುವಿನಿಂದ ಈ ಬಾರಿ ಜ.21ರಂದು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಹೇಳಿದರು. ಈ ಸರಳ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಹಾಜರಾಗಿ ಸರಳ ಆಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು.

        ಗೋಷ್ಠಿಯಲ್ಲಿ ವಕೀಲ ಬಿ.ಗಂಗಪ್ಪ, ಗುತ್ತೂರು ಗರಡಿಮನಿ ಬಸಣ್ಣ, ಬಿ.ಕೇಶವಮೂರ್ತಿ, ಬಾರ್ಕಿಹನುಮಂತಪ್ಪ ಸಾರಥಿ,ಭಾನುವಳ್ಳಿಪಿ.ಪರಮೇಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap