ಬೆಂಗಳೂರು
ನಗರದ ಫ್ರೀಡಂಪಾರ್ಕ್ನಲ್ಲಿ ಇತ್ತೀಚಿಗೆ ನಡೆದ ಸಿಎಎ ವಿರೋಧೀ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿ ಜೈಲು ಸೇರಿರುವ ದೇಶದ್ರೋಹಿ ಅಮೂಲ್ಯ ಕೊನೆಗೂ ಬಿಡುಗಡೆ ಕೋರಿ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದಾಳೆ.
ಫ್ರೀಡಂಪಾರ್ಕ್ನಲ್ಲಿ ಅಸಾವುದ್ದೀನ್ ಓವೈಸಿ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೂಲ್ಯ ಮಂಗಳವಾರ ಸೆಷನ್ ಕೋರ್ಟಿನಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾಳೆ. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ಸರ್ಕಾರಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಲಾಗಿದೆ.
ಅಮೂಲ್ಯ ಇಷ್ಟು ದಿನ ಜಾಮೀನಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿರಲಿಲ್ಲ.ಆದರೆ ಇಷ್ಟುದಿನದ ಜೈಲುವಾಸದ ನಂತರ ಅರ್ಜಿ ಸಲ್ಲಿಕೆ ಮಾಡಿದ್ದಾಳೆ. ಅಮೂಲ್ಯ ಬಂಧನದಿಂದ ಬೇಸತ್ತು ಪ್ರತಿಭಟಿಸಿದ್ದ ಆದ್ರಾ ಕೂಡ ಜೈಲಿನಲ್ಲಿಯೇ ಇದ್ದು, ಆಕೆಗೂ ಕೂಡ ಜಾಮೀನು ಮಂಜೂರಾಗಿಲ್ಲ.ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಅಮೂಲ್ಯ ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಹೋದಲ್ಲಿ ಬಂದಲ್ಲಿ ಮೈಕ್ ತಾನೇ ಕೇಳಿ ಪಡೆದುಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್ನಲ್ಲಿ ನಡೆದಿದ್ದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಳು.ಕೂಡಲೇ ಆಕೆಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/02/amulya-2-1582404113.gif)