ಜನ ಔಷಧ್ ಬೀದಿ ನಾಟಕ ಪ್ರದರ್ಶನ

ದಾವಣಗೆರೆ:
     
        ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮಂಗಳವಾರ, ದವನ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ಕಾಲೇಜಿನ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳು ಜನರಿಕ್ ಔಷಧಗಳ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.ಕಾಲೇಜಿನ 10 ವಿದ್ಯಾರ್ಥಿಗಳು `ಜನ್ ಔಷಧ್’ ಎಂಬ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಔಷಧಗಳ ಬೆಲೆಗಳು ಏರಿಕೆಯಾಗಿರುವ ಇಂದಿನ ದಿನಗಳಲ್ಲಿ ಜನರಿಕ್ ಔಷಧಗಳು ಬಡ ರೋಗಿಗಳಿಗೆ ಆರ್ಥಿಕವಾಗಿ ಹೇಗೆ ಸಹಾಯಕವಾಗಿವೆ ಎಂಬುದನ್ನು ವಿದ್ಯಾರ್ಥಿಗಳು ಅಭಿನಯದ ಮೂಲಕ ತಿಳಿಸಿಕೊಟ್ಟರು.
         ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಔಷಧಿಗಳು ಜನೌಷಧ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರೆಯುತ್ತವೆ ಎನ್ನುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಂದ ಬಂದಿದ್ದ ಪ್ರಯಾಣಿಕರು ಈ ಬೀದಿ ನಾಟಕವನ್ನು ವೀಕ್ಷಿಸಿದರು.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap