ಮೈಸೂರು:
ಬೀದಿಯಲ್ಲಿ ಆನೆ ನಡೆದರೆ ನಾಯಿ ಬೊಗಳಿದಂತೆ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ಳುತ್ತಿದ್ದಾರೆ ಎಂದು ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್.ಭಗವಾನ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಮಾನವ ಹಕ್ಕುಗಳ ಹೋರಾಟಗಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಬಿಜೆಪಿ ವಿರುದ್ಧ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರ ಆಪರೇಷನ್ ಭಯಕ್ಕೆ ಸಮ್ಮಿಶ್ರ ಸರ್ಕಾರದವರು ಹೆದರುವ ಅವಶ್ಯಕತೆ ಇಲ್ಲ. ಆನೆ ಬೀದಿಯಲ್ಲಿ ನಡೆದರೆ ಸಾಮಾನ್ಯವಾಗಿ ಶ್ವಾನ ಬೊಗಳುವುದು ಸಹಜ.
ಶ್ವಾನ ಬೊಗಳುವುದರಿಂದ ಆನೆಗೆ ಏನೂ ಆಗುವುದಿಲ್ಲ.ಅದೇ ರೀತಿ ಬಿಜೆಪಿಯವರು ಆಡುತ್ತಿದ್ದಾರೆ.ಇದಕ್ಕೆ ಸಮ್ಮಿಶ್ರ ಸರ್ಕಾರ ತಲೆಕೆಡಿಸಿ ಕೊಳ್ಳಬಾರದು.ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗದು. ಬಿಜೆಪಿ ನಾಯಕರ ಮಾತುಗಳಿಗೆ ರಾಜ್ಯ ಸರ್ಕಾರ ಪ್ರತಿಕ್ರಿಯೆ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದರು.
ಇದೇ ವೇಳೆ ಕೇಂದ್ರದ ವಿರುದ್ಧವೂ ಕಿಡಿಕಾರಿದ ಅವರು, ಕೇಂದ್ರ ಸರ್ಕಾರ ಜನಪರವಾಗಿ ಬಜೆಟ್ ಮಂಡಿಸಿಲ್ಲ. ಇದು ಬಂಡವಾಳಶಾಹಿಗಳ ಪರವಾದ ಬಜೆಟ್ ಎಂದು ವಾಗ್ದಾಳಿ ನಡೆಸಿದರು. ಇದಕ್ಕೂ ಮುನ್ನು ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
