ರಸ್ತೆ ಅಗಲೀಕರಣ : ಅನಧಿಕೃತ ಅಂಗಡಿಗಳ ತೆರವು

ಹರಪನಹಳ್ಳಿ

     ಪಟ್ಟಣದ ಮುಖಾಂತರ ಹಾದು ಹೋಗುವ ಹೊಸಪೇಟೆ-ಶಿವಮೊಗ್ಗ ರಸ್ತೆ ಅಭಿವೃದ್ಧಿಗಾಗಿ ಗುರುವಾರ ಬೆಳಿಗ್ಗೆ ಪುರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಪೋಲಿಸ್ ಬಿಗಿ ಭದ್ರತೆಯೊಂದಿಗೆ ಅನಧಿಕೃತ ಕಟ್ಟಡಗಳನ್ನು ಪುರಸಭೆ ಸಿಬ್ಬಂದಿಗಳು ತೆರವುಗೊಳಿಸಿದರು.

     ಹರಪನಹಳ್ಳಿ ಪಟ್ಟಣದಲ್ಲಿ ಹಾದು ಹೋಗುವ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ-25ರ ಕಿ.ಮೀ. 77.80 ರಿಂದ 79 ರವರೆಗಿನ ರಸ್ತೆಯ ಇಕ್ಕೆಲದಲ್ಲಿರುವ ಅನಧಿಕೃತ ಕಟ್ಟಡಗಳು ಹಾಗೂ ಶೆಡ್‍ಗಳನ್ನು ತೆರವುಗೊಳಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ನಡವಳಿಕೆ ತಿಳಿಸಿದ ಪರಿಣಾಮ ಇಂದು ತೆರವುಗೊಳಿಸಲಾಗಿದೆ.

     ಪುರಸಭೆ ಸಿಬ್ಬಂಧಿಗಳು ಪೋಲಿಸರೊಂದಿಗೆ ಬೆಳಗಿನ ಜಾವ ಜೆಸಿಬಿ ಮೂಲಕ ಹರಿಹರ ವೃತ್ತದಲ್ಲಿರುವ ಅನಧಿಕೃತವಾಗಿರುವ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿದರು. ವ್ಯಾಪರಸ್ಥರಿಗೆ ಮುಂಚಿತವಾಗಿ ಮಾಹಿತಿಯನ್ನು ಪುರಸಭೆ ಅಧಿಕಾರಿಗಳು ತಿಳಿಸಿದ್ದರು. ಹರಿಹರ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಭಿವೃದ್ಧಿಗಾಗಿ ರಸ್ತೆ ಅಗಲೀಕರಣ ಕಾರ್ಯ ನಡೆಸಲಾಗುತ್ತಿದೆ ಎಂದು ಮನವರಿಕೆ ಮಾಡಿದ್ದರು.

     ಎ.ಸಿ.ಪ್ರಸನ್ನಕುಮಾರ ಮಾತನಾಡಿ ಪಟ್ಟಣದ ಅಭಿವೃದ್ದಿ ಹಾಗೂ ರಸ್ತೆಯ ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿಗಳಿಗೆ ಗಮನಕ್ಕೆ ತರುವ ಮೂಲಕ ಹರಿಹರ ವೃತ್ತದಲ್ಲಿ ಅನಧಿಕೃತವಾಗಿ ತಲೆಎತ್ತಿದ ಅಂಗಡಿಗಳನ್ನು ಪೋಲಿಸ್ ಇಲಾಖೆಯ ಸಹಕಾರದೊಂದಿಗೆ ಲೋಕಪಯೋಗಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ಸಿಬ್ಬಂಧಿಗಳ ಮೂಲಕ ತೆರವುಗಳಿಸಲಾಗಿದೆ. ಅಂಗಡಿಗಳನ್ನು ತೆರವುಗೊಳಿಸುವುದರ ಬಗ್ಗೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು ಎಂದು ಹೇಳಿದರು.

    ನೆಲ್ಕುರುಳಿದ ಮರಗಳು: ಬೇವು, ಬಾದಮಿ ಸೇರಿದಂತೆ ವಿವಿಧ ರೀತಿಯ ಬೃಹತ್ ಮರಗಳನ್ನು ರಸ್ತೆ ಅಗಲೀಕರಣದಲ್ಲಿ ಜೆಸಿಬಿ ಯಂತ್ರಗಳು ನೆಲಕ್ಕೆ ಉರುಳಿಸಿದವು. ಪುರಸಭೆ ಮುಖ್ಯಾಧಿಕಾರಿ ನಾಗರಾಜ ನಾಯ್ಕ್, ಡಿವೈಎಸ್‍ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಕುಮಾರ, ಪಿಎಸ್‍ಐ ಪ್ರಕಾಶ, ಪುರಸಭೆ ಆರೋಗ್ಯಾಧಿಕಾರಿ ಮಂಜುನಾಥ ಬಿ., ಹಾಗೂ ಇತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link