ಉದ್ಯಾನದಲ್ಲಿ ಮರಗಳ್ಳತನ ಪತ್ತೆ

ತುಮಕೂರು

      ತುಮಕೂರು ನಗರದ ಬಟವಾಡಿ ಬಳಿ ಇರುವ ವಾಲ್ಮೀಕಿ ನಗರದ ವಿನಾಯಕ ಮಕ್ಕಳ ಉದ್ಯಾನವನದಲ್ಲಿ ನಾಲ್ಕು ಮರಗಳನ್ನು ಅಕ್ರಮವಾಗಿ ಕಡಿದಿರುವುದನ್ನು ಹಾಗೂ ಅವುಗಳನ್ನು ಸಾಗಿಸಲು ಯತ್ನಿಸಿರುವುದನ್ನು ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಪತ್ತೆ ಮಾಡಿದ್ದು, ಅರಣ್ಯ ಇಲಾಖೆಯವರು ಮುಂದಿನ ಕ್ರಮ ಕೈಗೊಂಡಿರುವ ಘಟನೆಯು ಮಂಗಳವಾರ ಸಂಜೆ ನಡೆದಿದೆ.

     ತಮಗೆ ದೊರೆತ ಮಾಹಿತಿ ಮೇರೆಗೆ ಮಹಾನಗರ ಪಾಲಿಕೆಯ ಆಯುಕ್ತ ಟಿ.ಭೂಪಾಲನ್, ಆರೋಗ್ಯಾಧಿಕಾರಿ ಡಾ. ನಾಗೇಶ್ ಕುಮಾರ್ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ, ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದರು. ಒಡನೆಯೇ ನಗರ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

       ಸ್ಥಳದಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮರಗಳನ್ನು ಸಾಗಿಸಲು ತಂದಿದ್ದ ಟಾಟಾ ಎಸಿ ವಾಹನವನ್ನು ಮತ್ತು ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯವರು ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap