ಕಲಬುರಗಿ:
18ನೇ ಅಖಿಲ ಭಾರತ ಕವಯತ್ರಿ ಸಮ್ಮೇಳನ ಬೀದರ್ನಲ್ಲಿ ಈ ತಿಂಗಳ 26ರಂದು ಆರಂಭವಾಗಲಿದೆ. ಮೂರು ದಿನಗಳ ಸಮ್ಮೇಳನದಲ್ಲಿ ದೇಶದ ವಿವಿಧೆಡೆಯ ಸುಮಾರು 500 ಕವಯತ್ರಿಯರು ಭಾಗವಹಿಸುವ ನಿರೀಕ್ಷೆಯಿದೆ.
ಸಮ್ಮೇಳನದ ಸಂಚಾಲಕರಾಗಿರುವ ಮಂಗಳಾ ಕಪ್ರೆ ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಟುಂಬ ಆರೋಗ್ಯ ಉತ್ತೇಜಿಸುವಲ್ಲಿ ಮಹಿಳೆಯರ ಪಾತ್ರ ಎಂಬುವುದು ಸಮ್ಮೇಳನದ ಘೋಷ ವಾಕ್ಯವಾಗಿರುತ್ತದೆ ಎಂದು ಹೇಳಿದರು.
ಮಹಿಳಾ ಸಾಹಿತ್ಯ, ರಾಷ್ಟ್ರೀಯ ಭಾವೈಕ್ಯತೆ, ಭಾಷಾ ಸೌಹಾರ್ದತೆ, ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆ ಉತ್ತೇಜಿಸಲು ಕವಯತ್ರಿಯರಿಗೆ, ಸಮಾವೇಶ ವೇದಿಕೆ ಕಲ್ಪಿಸಲಿದೆ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








