192 ಜನರಿಗೆ ಪಾಸಿಟಿವ್: 3 ಸಾವು-174 ಮಂದಿ ಗುಣಮುಖ

ತುಮಕೂರು

    ಕೊರೊನಾ ಸೋಂಕಿಗೆ ಕಡಿವಾಣ ಬೀಳುತ್ತಿಲ್ಲ. ಮಂಗಳವಾರ ಜಿಲ್ಲೆಯಲ್ಲಿ ಹೊಸದಾಗಿ 192 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6148ಕ್ಕೆ ಏರಿಕೆಯಾಗಿದೆ. ಜೊತೆಗೆ ಸೋಂಕು ತಗುಲಿದ ಮೂವರು ಮೃತಪಟ್ಟಿದ್ದಾರೆ. ಇವರೊಂದಿಗೆ ಸೋಂಕಿನಿಂದ ಮೃತರಾದವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ತುಮಕೂರು ತಾಲ್ಲೂಕಿನ 101 ಜನ ಸೇರಿದ್ದಾರೆ.

    ತುಮಕೂರು ನಗರದ ಪಿ.ಹೆಚ್.ಕಾಲೋನಿಯ 65 ವರ್ಷದ ಗಂಡಸು, ಪಾವಗಡದ 85 ವರ್ಷದ ಪುರುಷ ಹಾಗೂ ತಿಪಟೂರಿನ 70 ವರ್ಷದ ಗಂಡಸು ಸೋಂಕಿನಿಂದ ಮೃತಪಟ್ಟರೆ, ಕುಣಿಗಲ್ ಪಟ್ಟಣದ ಕೆ.ಆರ್.ಎಸ್ ಬಡಾವಣೆಯ 60 ವರ್ಷದ ಗಂಡಸು ಅನ್ಯ ಕಾರಣದಿಂದ ಅಸುನೀಗಿದ್ದಾರೆ. ಇವರು ಪಾಶ್ರ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ಸೋಂಕು ಇರುವುದು ಖಚಿತವಾಗಿತ್ತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಹೇಳಿದ್ದಾರೆ.

    ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಮಂಗಳವಾರ 174 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 4375 ಮಂದಿ ಗುಣಮುಖರಾದಂತಾಗಿದೆ. ಆದರೆ, ಜಿಲ್ಲೆಯಲ್ಲಿ 1604 ಸೋಂಕು ಸಕ್ರಿಯ ಪ್ರಕರಣಗಳಿವೆ. ಮಂಗಳವಾರ ವರದಿಯಾದ 192 ಪ್ರಕರಣಗಳಲ್ಲಿ ತುಮಕೂರು ತಾಲ್ಲೂಕಿನ 95 ಜನರಿಗೆ ಸೋಂಕು ಖಚಿತವಾಗಿದೆ. ಪಾವಗಡ ತಾಲ್ಲೂಕಿನ 22, ತಿಪಟೂರು ತಾಲ್ಲೂಕಿನ 13, ಕುಣಿಗಲ್ ತಾಲ್ಲೂಕಿನ 11, ಶಿರಾ ತಾಲ್ಲೂಕಿನಲ್ಲಿ 10, ಮಧುಗಿರಿ ತಾಲ್ಲೂಕಿನ 10, ತುರುವೇಕೆರೆ ತಾಲ್ಲೂಕಿನಲ್ಲಿ 9, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 8, ಕೊರಟಗೆರೆ ತಾಲ್ಲೂಕಿನ 7, ಗುಬ್ಬಿ ತಾಲ್ಲೂಕಿನಲ್ಲಿ 7 ಜನರಿಗೆ ಕೊರೊನಾ ಸೋಂಕು ಖಚಿತವಾಗಿದೆ. ಇವರಲ್ಲಿ 105 ಪುರುಷರು, 87 ಮಹಿಳೆಯರು, 9 ಮಂದಿ ಮಕ್ಕಳು, 60 ವರ್ಷ ಮೇಲ್ಪಟ್ಟ 32 ಜನರಿದ್ದಾರೆ.

    ಇದೂವರೆಗೆ ಜಿಲ್ಲೆಯಲ್ಲಿ ವರದಿಯಾಗಿರುವ ಒಟ್ಟು 6148 ಸೋಂಕು ಪ್ರಕರಣಗಳಲ್ಲಿ ತುಮಕೂರು ತಾಲ್ಲೂಕಿನಲ್ಲಿ 2270, ಕುಣಿಗಲ್ ತಾ. 522, ಪಾವಗಡ ತಾ. 522, ತಿಪಟೂರು ತಾ. 483, ಗುಬ್ಬಿ ತಾ. 446, ಶಿರಾ ತಾ. 438, ಮಧುಗಿರಿ ತಾ. 410, ಚಿಕ್ಕನಾಯಕನಹಳ್ಳಿ ತಾ. 364, ತುರುವೇಕೆರೆ ತಾ. 363, ಕೊರಟಗೆರೆ ತಾ. 330 ಪ್ರಕರಣ ವರದಿಯಾಗಿವೆ.

   ಈವರೆಗೂ ಕೊರೊನಾ ಸೋಂಕು ತಗುಲಿದ 6148 ಜನರಲ್ಲಿ 162 ಜನ ಮೃತಪಟ್ಟಿದ್ದಾರೆ. ತುಮಕೂರು ತಾಲ್ಲೂಕಿನ 101, ಕುಣಿಗಲ್ ತಾಲ್ಲೂಕಿನಲ್ಲಿ 10, ಪಾವಗಡ ತಾಲ್ಲೂಕಿನ 9, ಗುಬ್ಬಿ ತಾಲ್ಲೂಕಿನಲ್ಲಿ 9, ತಿಪಟೂರು ತಾಲ್ಲೂಕಿನ 8, ಶಿರಾ ತಾಲ್ಲೂಕಿನ 7, ಕೊರಟಗೆರೆ ತಾಲ್ಲೂಕಿನಲ್ಲಿ 5, ಮಧುಗಿರಿ ತಾಲ್ಲೂಕಿನಲ್ಲಿ 4, ತುರುವೇಕೆರೆ ತಾಲ್ಲೂಕು 5, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 4 ಮಂದಿ ಕೋವಿಡ್‍ಗೆ ಬಲಿಯಾಗಿದ್ದಾರೆ.

   ಸೋಂಕಿತರಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಇದೂವರೆಗೆ 6148 ಮಂದಿಗೆ ಸೋಂಕು ತಗುಲಿದೆ, ಇವರಲ್ಲಿ 4375 ಮಂದಿ ಗುಣಮುಖರಾಗಿದ್ದಾರೆ..

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link