20000 ಗ್ರಾಮೀಣ ಹಾಗು ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ : ಗೋವಿಂದ ಕಾರಜೋಳ

ಬೆಂಗಳೂರು

     ಮುಂದಿನ ಆರ್ಥಿಕ ಸಾಲಿನಲ್ಲಿ ರಾಜ್ಯದಲ್ಲಿ 20 ಸಾವಿರ ಗ್ರಾಮೀಣ ಮತ್ತು ಜಿಲ್ಲಾ ಮುಖ್ಯರಸ್ತೆಗಳನ್ನು ಮೇಲ್ದರ್ಜೆಗೇ ರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆಯಲ್ಲಿ ಪ್ರಕಟಿಸಿದರು.

    ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ಖಂಡ್ರೆ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಎಲ್ಲಾ ತಾಲ್ಲೂಕುಗಳನ್ನು ಸಮನಾಗಿ ಜಿಲ್ಲಾ ಮತ್ತು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ವಿವರಿಸಿದರು.

    ಬಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ 28 ಕಿ.ಮೀ. ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು, ಕಳೆದ ಜೂನ್‍ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದ್ದು, ರಸ್ತೆ ನಿರ್ವಹಣೆಯನ್ನು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

   ಇದಕ್ಕೂ ಮುನ್ನ ಮಾತನಾಡಿದ ಈಶ್ವರ್ಖಂಡ್ರೆ, ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದ ನಂತರ ರಸ್ತೆ ನಿರ್ವಹಣೆ ಸರಿಯಾಗದೆ ಆಗದೆ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ ಎಂದು ಆರೋಪಿಸಿದರು.

    ಕಳೆದ ಆಗಸ್ಟ್‍ನಲ್ಲಿ ಉಂಟಾದ ನೆರೆ ಹಾವಳಿಯಿಂದ ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳ ತುರ್ತು ದುರಸ್ತಿಗೆ ಅನುದಾನ ಲಭ್ಯವಿಲ್ಲದಿದ್ದುರಿಂದ ವಲಯಗಳ ಹಂಚಿಕೆ ಮಾಡಿದ್ದ ಅನುದಾನವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರ ಪ್ರಶ್ನೆಗೆ ಡಿಸಿಎಂ ಉತ್ತರಿಸಿದರು. ಅನುದಾನ ಹಂಚಿಕೆಯಾದ ನಂತರ ಹಿಂಪಡೆಯಲಾದ ಅನುದಾನದ ಕಾಮಗಾರಿಗಳ ಕೈಗೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link