ಬೆಂಗಳೂರು
ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ನೆದರ್ಲ್ಯಾಂಡ್ಸ್ನ ರಾಜಧಾನಿ ಆಮ್ಸ್ಟರ್ಡ್ಯಾಂನಿಂದ ಶುಕ್ರವಾರ ಬೆಳಗ್ಗೆ 9.15 ಗಂಟೆಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 206 ಅನಿವಾಸಿ ಭಾರತೀಯರು ಬಂದಿಳಿದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಮೂವತ್ತೆರಡನೇ ಏರ್ ಇಂಡಿಯಾ ವಿಮಾನದಲ್ಲಿ 206 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದು, ಅದರಲ್ಲಿ 02 ಮಕ್ಕಳು, 204 ಪುರುಷರು ಮತ್ತು ಮಹಿಳೆಯರಿದ್ದಾರೆ ಎಂದರು.
ತಜ್ಞ ವೈದ್ಯರು ಹಾಗೂ ಸಿಬ್ಬಂದಿ 206 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಸದ್ಯ ಅವರೆಲ್ಲರನ್ನೂ ಕ್ವಾರಂಟೈನ್ಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
