ಬಣ್ಣದಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳ 34ನೇ ಪುಣ್ಯ ಸ್ಮರಣೋತ್ಸವ

ಹಾವೇರಿ :

    ಧಾರ್ಮಿಕತೆ ಹಾಗೂ ಧಾರ್ಮಿಕ ಪರಂಪರೆಗಳನ್ನಿಟ್ಟುಕೊಂಡು ಜೀವನವನ್ನು ಕಟ್ಟಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುವು ದರೊಂದಿಗೆ ಸಾಧನೆಯನ್ನು ಮಾಡುವುದಕ್ಕೆ ಸಾಧ್ಯವಾಗುತ್ತದೆ ಎಂದು ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮಿಜಿ ಹೇಳಿದರು.

    ನಗರದ ಜರಸೂರು ಬಣ್ಣದಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳ 34ನೇ ಪುಣ್ಯ ಸ್ಮರಣೋತ್ಸವ ಹಾಗೂ ಅಭಿನವ ರುದ್ರ ಚನ್ನ ಮಲ್ಲಿಕಾರ್ಜುನ ಸ್ವಾಮಿಜಿಗಳ 9ನೇ ವರ್ಧಂತಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಧರ್ಮೋತ್ತೇಜಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮದ ಮೊದಲ ದಿನದ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

       ಪ್ರಸಕ್ತ ಧಾರ್ಮಿಕ ಕಾರ್ಯಗಳು ಜರುಗುವುದು ಅಪರೂಪ, ಧಾರ್ಮಿಕ ಕಾರ್ಯಗಳಲ್ಲಿ ನೀಡಲಾಗುವ ಸಂದೇಶಗಳನ್ನು ಮನವಿಟ್ಟು ಕೇಳುವುದರೊಂದಿಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದಕ್ಕೆ ಮುಂದಾಗುವುದು ಇನ್ನು ಅಪರೂಪವಾಗುತ್ತಿದೆ ಎಂದರು.
ಇಂದಿನ ಯುವ ಜನಾಂಗ ಧಾರ್ಮಿಕ ಕಾರ್ಯಗಳಿಂದ ದೂರವಾಗುತ್ತಿರುವುದು ಕಂಡುಬರುತ್ತಿದೆ. ಇದು ಹೀಗೆ ಮುಂದುವರೆದರೆ ಮುಂದಿನ ಜನಾಂಗಕ್ಕೆ ಧರ್ಮದ ಅರಿವೇ ಇರದೇ ಧರ್ಮ ಸಂಕಷ್ಟದಲ್ಲಿ ಸಿಲುಕುತ್ತದೆ, ಯುವ ಜನತೆಯೊಂದಿಗೆ ಮಕ್ಕಳನ್ನು ಧಾರ್ಮಿಕ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಬಹಳ ಅವಶ್ಯಕವಾಗಿದೆ ಎಂದು ತಿಳಿಸಿದರು.

        ಹಣದಿಂದ ಪುಸ್ತಕವನ್ನು ಕೊಳ್ಳಬಹುದೇ ಹೊರತು ವಿದ್ಯೆಯನ್ನು ಕೊಳ್ಳುವುದಕ್ಕೆ ಸಾಧ್ಯವಿಲ್ಲ, ಹಣದಿಂದ ಔಷಧಿಯನ್ನು ಕೊಳ್ಳಬಹುದೇ ಹೊರತು ಆರೋಗ್ಯವನ್ನು ಕೊಳ್ಳಲಿಕ್ಕಾಗಿದು, ಹಣದಿಂದ ಸಂತೆಯಲ್ಲಿ ಏನೆಲ್ಲ ಕೊಳ್ಳಬಹುದು ಆದರೆ ಭಕ್ತಿಯನ್ನು ಕೊಳ್ಳಲಿಕ್ಕಾಗದು. ಭಕ್ತಿ ದೊರೆಯುವುದು ಮಠಮಾನ್ಯಗಳಲ್ಲಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮಾತ್ರ ಸಾಧ್ಯ. ನಾವು ಮಾಡುವ ಧಾರ್ಮಿಕ ಪುಣ್ಯಕಾರ್ಯಗಳಿಂದ ನಮಗಲ್ಲದೆ ನಮ್ಮ ಮುಂದಿನ ಜನಾಂಗಕ್ಕೂ ದೊರೆಯುತ್ತದೆ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಹೇಳಿದರು.

         ಸಮ್ಮುಖ ವಹಿಸಿ ಮಾತನಾಡಿದ ಹುಕ್ಕೇರಿಮಠದ ಸದಾಶಿವ ಸ್ವಾಮಿಜಿ, ವಿಶ್ವದ ಅನೇಕ ರಾಷ್ಟ್ರಗಳು ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಿರಬಹುದು ಆದರೆ ಆ ದೇಶಗಳಲ್ಲಿ ಧಾರ್ಮಿಕತೆ ಕುಸಿತವನ್ನು ಕಂಡಿದ್ದರೆ ಭಾರತದಲ್ಲಿ ಮಾತ್ರ ಧಾರ್ಮಿಕತೆಯೊಂದಿಗೆ ಭವ್ಯ ಭಾರತ ನಿರ್ಮಾಣವಾಗುತ್ತಿದೆ ಎನ್ನುವುದು ಕಂಡುಬರುತ್ತಿದೆ ಎಂದು ತಿಳಿಸಿದರು.

      ಇಂದಿನ ತಾಂತ್ರಿಕ ಯುಗದಲ್ಲಿ ಆರ್ಥಿಕವಾಗಿ ಸದೃಢರಾದಂತೆ ಐಶಾರಾಮಿ ಜೀವನಕ್ಕೆ ಮಾರುಹೋಗಿ ಧಾರ್ಮಿಕ ಪರಂಪರೆ, ಸಂಸ್ಕತಿ, ಸಂಸ್ಕಾರ ಹಾಗೂ ಭಕ್ತಿಯನ್ನು ಮರೆಯುತ್ತಿದ್ದೇವೆ, ಉನ್ನತ ಜೀವನವನ್ನು ನಡೆಸುವುದರೊಂದಿಗೆ ಇವೆಲ್ಲವನ್ನು ಎಲ್ಲರೂ ಮತ್ತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಮುಂದಿನ ಜನಾಂಗಕ್ಕೂ ಕೊಡುಗೆ ಆಗಿ ನೀಡಬೇಕಾಗಿದೆ ಎಂದು ಹೇಳಿದರು.

       ಸಾನಿಧ್ಯ ವಹಿಸಿ ಮಾತನಾಡಿದ ಕರ್ಜಗಿ ಗೌರಿಮಠ ಹಾಗೂ ನಗರದ ಗುರುಪಾದದೇವರಮಠದ ಶಿವಯೋಗಿ ಶಿವಾಚಾರ್ಯ ಸ್ವಾಮಿಜಿ, ಮಕ್ಕಳಿಗೆ ಆಸ್ತಿಯನ್ನು ಮಾಡದೇ ಅವರಿಗೆ ಉನ್ನತ ಶಿಕ್ಷಣ, ಧಾರ್ಮಿಕತೆ, ಸಂಸ್ಕøತಿಯನ್ನು ಹಾಗೂ ಸಂಸ್ಕಾರ ನೀಡುವ ಮೂಲಕ ಅವರನ್ನೇ ಒಂದು ಆಸ್ತಿಯನ್ನಾಗಿ ಮಾಡಿರಿ ಎಂದರು.

       ಹತ್ತು ಭಾವಿಗೆ ಒಂದು ಕೆರೆ ಸಮಾನ, ಹತ್ತು ಕೆರೆಗಳಿಗೆ ಒಂದು ಸರೋವರ ಸಮಾನ, ಹತ್ತು ಸರೋವರಕ್ಕೆ ಒಬ್ಬ ಪುತ್ರ ಸಮಾನವಾದರೆ ಹತ್ತು ಪುತ್ರರಿಗೆ ಒಂದು ಮರ ಸಮಾನ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಟ ಒದೊಂದು ಮರವನ್ನು ಬೆಳೆಸುವುದಕ್ಕೆ ಮುಂದಾಗುವಂತೆ ಕರೆ ನೀಡಿದರು.

        ಅತಿಥಿಗಳ ಪರವಾಗಿ ನಗರಸಭಾ ಸದಸ್ಯ ಮಲ್ಲಿಕಾರ್ಜುನ ಸಾತೇನಹಳ್ಳಿ ಮಾತನಾಡಿ, ದೂರದರ್ಶನಗಳು ಬಂದ ನಂತರ ಜನತೆ ವಿಶೇಷವಾಗಿ ಮಹಿಳೆಯರು ಧಾರ್ಮೀಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಂಖ್ಯೆ ಕ್ಷೀಣಿಸುತ್ತಿದೆ. ಟಿವಿಯಲ್ಲಿನ ದಾರವಾಹಿಗಳನ್ನು ನೋಡುವುದನ್ನು ಬಿಟ್ಟು ಇಂದಿನ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರೂ ಧನ್ಯವಾದಗಳು ಎನ್ನುವ ಮೂಲಕ ಜನತೆ ಧಾರ್ಮಿಕ ಕಾರ್ಯಗಳಿಂದ ದೂರವಿರುವುದು ಮತ್ತು ಟಿವಿಯಲ್ಲಿನ ದಾರವಾಹಿಗಳಿಗೆ ಎಷ್ಟು ಮಾರು ಹೋಗಿದ್ದಾರೆ ಎನ್ನುವುದನ್ನು ಸೂಚ್ಯವಾಗಿ ಹೇಳಿದರು.
ಹರಸೂರು ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮಿಜಿ ಅಧ್ಯಕ್ಷತೆ ವಹಿಸಿದ್ದರು.

         ವೇದಿಕೆಯಲ್ಲಿ ಮೂರು ದಿನಗಳ ಕಾರ್ಯಕ್ರಮ ಸಮೀತಿ ಅಧ್ಯಕ್ಷ ಜಗದೀಶ ಕನವಳ್ಳಿ, ಉಪಾಧ್ಯಕ್ಷ ಶಿವಯೋಗಿ ಹುಲಿಕಂತಿಮಠ, ನಿಕಟಪೂರ್ವ ಅಧ್ಯಕ್ಷ ಮಹಲಿಂಗಸ್ವಾಮಿ ಹಿರೇಮಠ, ನಗರಸಭಾ ಸದಸ್ಯರಾದ ರೇಣುಕಾ ಪುತ್ರನ್, ಚೈತ್ರಾ ಹತ್ತಿ, ಚೌಡೇಶ್ವರಿ ಮಹಿಳಾ ಮಂಡಳದ ಅಧ್ಯಕ್ಷೆ ಶಾಂತಾ ಡಾವಣಗೇರಿ ಪ್ರಸ್ತಾವಿಕವಾಗಿ ಮಾತನಾಡಿದರು, ಗಿರಿಜಾ ಸಾತೇನಹಳ್ಳಿ ಸ್ವಾಗತಿಸಿದರು. ನಾಗರಾಜ ನಡುವಿನಮಠ ನಿರ್ವಹಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link