ತುಮಕೂಋ ಹೊಸದಾಗಿ 37 ಸೋಂಕು ಪತ್ತೆ..!

ತುಮಕೂರು

    ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 37 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದೂವರೆಗೆ ಜಿಲ್ಲೆಯ ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

    ತುಮಕೂರು ನಗರದ ಬನಶಂಕರಿ ಬಡಾವಣೆಯ 76 ವರ್ಷದ ಮಹಿಳೆ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಇವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಇವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟೀವ್ ಇರುವುದು ಖಚಿತವಾಗಿತ್ತು, ಇವರು ಇದೇ 21ರಂದು ಅಸುನೀಗಿದರು.

    ಗುಬ್ಬಿ ತಾಲ್ಲೂಕು ನಿಟ್ಟೂರಿನ52 ವರ್ಷದ ಪುರುಷ ಸೋಂಕು ತಗುಲಿ ಸಾವಿಗೀಡಾಗಿದ್ದಾರೆ. ಇವರ ಗಂಟಲು ದ್ರವದ ಪರೀಕ್ಷೆಯಲ್ಲಿ ಸೋಂಕು ಇರುವುದು ವರದಿಯಾಗಿತ್ತು, ಇವರು ಇದೇ 21ರಂದು ಮೃತಪಟ್ಟರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

    ಈವರೆಗೆ ಜಿಲ್ಲೆಯಲ್ಲಿ ಒಟ್ಟು 28 ಜನ ಮೃತಪಟ್ಟಿದ್ದಾರೆ. ಇದರಲ್ಲಿ ತುಮಕೂರು ತಾಲ್ಲೂಕಿನ 18, ಗುಬ್ಬಿ, ಕುಣಿಗಲ್, ಶಿರಾ ತಾಲ್ಲೂಕಿನ ತಲಾಇಬ್ಬರು ಹಾಗೂ ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಮಧುಗಿರಿ, ಪಾವಗಡ ತಾಲ್ಲೂಕಿನಲ್ಲಿ ತಲಾ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

     ಮಂಗಳವಾರದ 37 ಜನರು ಸೇರಿದಂತೆ ಕೋವಿಡ್ ಸೋಂಕಿತರ ಸಂಖ್ಯೆ 813ಕ್ಕೆ ಏರಿದೆ. ಇದರಲ್ಲಿ ತುಮಕೂರು ತಾಲ್ಲೂಕಿನ 20 ಜನರಲ್ಲಿ ಕೋವಿಡ್ ವೈರಸ್ ಖಚಿತವಾಗಿದೆ. ಶಿರಾ ತಾಲ್ಲೂಕಿನ 6, ಗುಬ್ಬಿ ಹಾಗೂ ಪಾವಗಡ ತಾಲ್ಲುಕಿನ ತಲಾ 3, ಕುಣಿಗಲ್ ಹಾಗೂ ತಿಪಟೂರು ತಾಲ್ಲೂಕಿನ ತಲಾ ಇಬ್ಬರು, ಮಧುಗಿರಿ ತಾಲ್ಲೂಕಿನ ಒಬ್ಬರಿಗೆ ಸೋಂಕು ಕಾಣಿಸಿದೆ. ಇವರಲ್ಲಿ 30 ಪುರುಷರು, 7 ಮಹಿಳೆಯರು ಸೇರಿದ್ದಾರೆ. ಇವರಲ್ಲಿ ಐದು ಮಂದಿ ಪೊಲೀಸ್ ಸಿಬ್ಬಂದಿ, 60 ವರ್ಷ ವಯಸ್ಸಿನ ಮೇಲ್ಪಟ್ಟ 5 ಜನ ಇದ್ದಾರೆ.

     ಈವರೆಗೆ ಜಿಲ್ಲೆಯಲ್ಲಿ ವರದಿಯಾಗಿರುವ ಒಟ್ಟು 813 ಸೋಂಕು ಪ್ರಕರಣಗಳಲ್ಲಿ ತುಮಕೂರು ತಾಲ್ಲೂಕಿನಲ್ಲಿ ಅತಿಹೆಚ್ಚು ಪ್ರಕರಣಗಳಿವೆ, ಇದೂವರೆಗೆ ತುಮಕೂರು ತಾ. 383, ಪಾವಗಡ ತಾ. 76, ಶಿರಾ 69, ಮಧುಗಿರಿ ತಾ. 67, ಕುಣಿಗಲ್ ತಾ. 65, ಕೊರಟಗೆರೆ ತಾ. 46, ಚಿಕ್ಕನಾಯಕನಹಳ್ಳಿ ತಾ. 46, ಗುಬ್ಬಿ ತಾ. 37, ತಿಪಟೂರು ತಾ. 29, ತುರುವೇಕೆರೆ ತಾ. 25 ಪ್ರಕರಣ ವರದಿಯಾಗಿವೆ.
ಮಂಗಳವಾರ ಗುಣಮುಖರಾಗಿ ಆಸ್ಪತ್ರೆಯಿಂದ 25 ಮಂದಿ ಬಿಡುಗಡೆಯಾಗಿದ್ದು, ಈವರೆಗೆ 436 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 344 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 28 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಡಿಹೆಚ್‍ಓ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap