ಬೆಳಗಾವಿ
ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿಯಾಗಿ 500 ಕೋಟಿ ರೂ ಅನುದಾನವನ್ನು ಈ ಬಾರಿಯ ಬಜೆಟ್ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಇಲಾಖೆಗೆ ಅನುದಾನದಲ್ಲಿ ಕಡಿತ ಮಾಡಲಾಗಿದೆ ಎಂಬ ಆರೋಪ ಬಂದಿದೆ. ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರೆಸಲಾಗಿದ್ದು, ಹೊಸ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಜೈನ, ಕ್ರಿಶ್ವಿಯನ್, ಮುಸ್ಲಿಂ, ಪಾರ್ಸಿ ಸೇರಿ ಎಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ದಿಗೆ ವಿನೂತನ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ಅಲ್ಪಸಂಖ್ಯಾತರು ನೆಮ್ಮದಿಯಿಂದ ಬದುಕುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿ ಬಗೆಗಿನ ಯೋಜನೆಗಳ ಮಾಹಿತಿ ಪುಸ್ತಕವನ್ನು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಸುಪ್ರೀಂಕೋಟ್ ನ್ಯಾಯಾಧೀಶ ವಿ.ಗೋಪಾಲ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ