ಬೆಂಗಳೂರು
ಇತ್ತೀಚೆಗೆ ನಡೆದ ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಸುತ್ತಿನ ಕಾರ್ಯಾಚರಣೆ ನಡೆಸಿದ್ದಾರೆ. ಶನಿವಾರ ತಡರಾತ್ರಿ ಸಿಸಿಬಿ ಪೊಲೀಸರು ಹೆಗ್ಗಡೆ ನಗರದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಚೇರಿಯಲ್ಲಿ ಅಡಗಿ ಕುಳಿತಿದ್ದ 8 ಆರೋಪಿಗಳನ್ನು ಮಾರಾಕಾಸ್ತ್ರಗಳ ಸಮೇತ ಬಂಧಿಸಿದ್ದಾರೆ.
ಈ ವೇಳೆ ಬಂಧಿತರ ಬಳಿ ಇದ್ದ ಕಬ್ಬಿಣದ ರಾಡ್, ಬ್ಯಾಟ್ಗಳು, ಇತರೆ ಆಯುಧಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ .ಸಿಸಿಬಿ, ಡಿಜೆ ಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹೆಗ್ಗಡೆ ನಗರದ ಎಸ್ಡಿಪಿಯ ಕಚೇರಿಯಲ್ಲಿದ್ದ 8 ಜನ ಸೇರಿ 57 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ