ಹಾವೇರಿ ಲೋಕಸಭಾ ಕ್ಷೇತ್ರ: ಆರನೇ ದಿನ ಆರು ನಾಮಪತ್ರ ಸಲ್ಲಿಕೆ

ಹಾವೇರಿ:

       ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದ್ಯಾಮನಗೌಡ ರಾಮನಗೌಡ ಪಾಟೀಲ(ಡಿ.ಆರ್.ಪಾಟೀಲ) ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತಪ್ಪ ದೇವೇಂದ್ರಪ್ಪ ಕಬ್ಬಾರ, ಮಂಜುನಾಥ ಪಂಚಾನನ ಉರ್ಫ ಬಡಿಗೇರ ಅವರು ಬುಧವಾರ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣಾ ಬಾಜಪೇಯಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

        ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಭ್ಯರ್ಥಿ ದ್ಯಾಮನಗೌಡ ರಾಮನಗೌಡ ಪಾಟೀಲ ಅವರು ನಾಲ್ಕು ನಾಮಪತ್ರಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಹನುಮಂತಪ್ಪ ದೇವೇಂದ್ರಪ್ಪ ಕಬ್ಬಾರ ಹಾಗೂ ಮಂಜುನಾಥ ಬಡಿಗೇರ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಆರನೇ ದಿನವಾದ ಬುಧವಾರದವರೆಗೆ ಆರು ಅಭ್ಯರ್ಥಿಗಳಿಂದ ಹನ್ನೆರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ಎಪ್ರಿಲ್ 4 ರ ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link