ಬೆಂಗಳೂರು ಗಲಭೆ ಪ್ರಕರಣ :60 ಪೊಲೀಸರಿಗೆ ಗಾಯ

ಬೆಂಗಳೂರು:

        ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

      ಬೆಂಗಳೂರಿನ ಕಾವಲ್ ಭೈರಸಂದ್ರ, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ. ಅಂತೆಯೇ ಪೊಲೀಸ್ ಠಾಣೆ ಮೇಲೆ ಸುಮಾರು 250ರಿಂದ 350ರಷ್ಟು ದಷ್ಕರ್ಮಿಗಳು ದಾಳಿ ಮಾಡಿದ್ದು, ಈ ವೇಳೆ ಪೊಲೀಸ್ ಠಾಣೆಯ ಪಾರ್ಕಿಂಗ್ ಜಾಗದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದಾರೆ.

     ಅಂತೆಯೇ ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಕೆಲವರಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಯಾರೂ ರಸ್ತೆಯಲ್ಲಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ಕಲ್ಲು, ಬಾಟಲ್ ಗಳಿಂದ ದಾಳಿ ನಡೆದಿತ್ತು. ಈಗ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap