ಅತ್ಯಾಚಾರಿಗೆ 7 ವರ್ಷ ಕಠಿಣ ಶಿಕ್ಷೆ

ತುಮಕೂರು
 
    ಕುರಿ ಕಾಯಲು ಹೋಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ್ದ ಅಪರಾಧಿಗೆ ಇಲ್ಲಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.18.4.2005 ರಂದು ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ವ್ಯಾಪ್ತಿಯ ಹಂಚಿಪುರ ಗ್ರಾಮದ ಬಳಿ ಬಾಲಕಿ ಕುರಿ ಕಾಯುತ್ತಿದ್ದಾಗ ಗೋವಿಂದ ಎಂಬಾತ ಬಲತ್ಕಾರವಾಗಿ ಅತ್ಯಾಚಾರ ವೆಸಗಿದ್ದ. ಈ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಅಂದಿನ ಸಿಪಿಐ ಎ.ಆರ್.ಬಲರಾಮೇಗೌಡ ದೂರು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
 
    ಪ್ರಕರಣದ ವಿಚಾರಣೆಯು ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಗೋವಿಂದನಿಗೆ ಮೇಲ್ಕಂಡಂತೆ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ದೇಶಪಾಂಡೆ ಅವರು ತೀರ್ಪು ಪ್ರಕಟಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ರೀತಿ ಪರಿಹಾರ ಹಣವನ್ನು ಸಂತ್ರಸ್ತರ ಪರಿಹಾರ ನಿಧಿಯಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಕೆ.ಎಚ್.ಶ್ರೀಮತಿ ವಾದಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link