ಚಿತ್ರದುರ್ಗ:
ಇದೇ ತಿಂಗಳ ಹದಿನೆಂಟರಂದು ನಡೆಯು ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ನಾರಾಯಣಸ್ವಾಮಿ ಪರವಾಗಿ ಸೂರನಹಳ್ಳಿ ವಿಜಯಕುಮಾರ್ ಭಾನುವಾರ ಹೊಳಲ್ಕೆರೆ ತಾಲೂಕು ಲಿಂಗವ್ವನಾಯಕನಹಳ್ಳಿಯಲ್ಲಿ ಬಿರುಸಿನ ಮತ ಪ್ರಚಾರ ಕೈಗೊಂಡರು.
ದೇಶದ ಪ್ರಧಾನಿಯಾಗಿ ನಾಲ್ಕುವರೆ ವರ್ಷಗಳ ಕಾಲ ಸ್ವಚ್ಚ ಹಾಗೂ ಪ್ರಾಮಾಣಿಕ ಆಡಳಿತ ನಡೆಸಿದ ನರೇಂದ್ರಮೋದಿರವರು ದೇಶದ ಜನತೆಗೆ ನೂರಾರು ಜನಪರ ಯೋಜನೆಗಳನ್ನು ಕೊಡುಗೆಯಾಗಿ ನೀಡಿ ವಿಶ್ವದಲ್ಲಿಯೇ ಭಾರತ ತಲೆಎತ್ತಿ ನಿಲ್ಲುವಂತೆ ಮಾಡಿದ್ದಾರೆ. ಹಾಗಾಗಿ ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಎ.ನಾರಾಯಣಸ್ವಾಮಿರವರನ್ನು ಬಹುಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್ಗೆ ಕಳಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಪ್ರಧಾನಿ ಮೋದಿರವರ ದೇಶಭಕ್ತಿಯನ್ನು ಮೆಚ್ಚಿ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ.ಗೆಲುವು ಸಾಧಿಸಿದೆ. ಅದೇ ರೀತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ.ಗೆ ಬಹುಮತ ನೀಡಬೇಕೆಂದು ಜನತೆಯಲ್ಲಿ ಕೋರಿದರು.
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಮ್ಮ ದೇಶದ 44 ಯೋಧರನ್ನು ಬಲಿತೆಗೆದುಕೊಂಡಿದ್ದಕ್ಕೆ ಪ್ರತೀಕಾರವಾಗಿ ಪ್ರಧಾನಿ ಮೋದಿರವರು ಕೈಗೊಂಡ ದಿಟ್ಟ ಕ್ರಮ ದೇಶದ ಜನರ ಮೆಚ್ಚುಗೆ ಗಳಿಸಿದೆ.
ಭಾರತ ಬೇರೆ ದೇಶಗಳ ಎದುರು ತಲೆ ಎತ್ತಿ ನಿಲ್ಲಬೇಕಾಗಿರುವುದರಿಂದ ಎರಡನೇ ಬಾರಿಗೆ ಮೋದಿಯನ್ನು ಪ್ರಧಾನಿ ಮಾಡಬೇಕಾಗಿರುವುದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಎ.ನಾರಾಯಣಸ್ವಾಮಿಯನ್ನು ಗೆಲ್ಲಿಸುವಂತೆ ಕೋರಿದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಮಾಜ ಕಲ್ಯಾಣ ಸಚಿವರಾಗಿದ್ದ ಎ.ನಾರಾಯಣಸ್ವಾಮಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸಿಮೆಂಟ್ ರಸ್ತೆಗಳನ್ನು ಮಾಡಿಸಿದ ಕೀರ್ತಿ ಎ.ನಾರಾಯಣಸ್ವಾಮಿಗೆ ಸಲ್ಲುತ್ತದೆ ಎಂದು ಅವರ ಜನಪರ ಕಾಳಜಿಯನ್ನು ಗುಣಗಾನ ಮಾಡಿದರು.ಟಿ.ಮೋಹನ್, ವಿ.ರಾಜಣ್ಣ, ಪ್ರಭು, ಕುಬೇಂದ್ರ, ಓಬಣ್ಣ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
