ಬೆಂಗಳೂರು:
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ನಗರದ ನಾಲ್ವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ರಾಜಾಜಿನಗರದ ಲೋಕೇಶ್, ಬಾಬು, ಮಂಜುನಾಥ್ ಹಾಗೂ ಹರೀಶ್ ಎಂದು ಗುರುತಿಸಲಾಗಿದೆ. ಮೃತರು ಮದುವೆ ಕಾರ್ಯ ನಿಮಿತ್ತ ಶನಿವಾರ ತಡರಾತ್ರಿ ಬೆಂಗಳೂರಿನಿಂದ ಮಧುರೈಗೆ ಕಾರಿನಲ್ಲಿ ಹೊರಟಿದ್ದರು.
ಭಾನುವಾರ ಮುಂಜಾನೆ 5ರ ವೇಳೆಯಲ್ಲಿ ದಿಂಡಿಗಲ್ ಜಿಲ್ಲೆಯ ತಾಡಿಕೊಂಬು ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರೂ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ತಾಡಿಕೊಂಬು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/10/accident.gif)