ಬಳ್ಳಾರಿ:
ಜಿಲ್ಲೆಯ ಸೋಮಲಾಪುರ ಗ್ರಾಮದ ಕಾಲುವೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರನ್ನು ಮತ್ತು ಅಲ್ಲಿನ ಜಾನುವಾರುಗಳನ್ನು ತೀವ್ರ ಭೀತಿಗೆ ಗುರಿ ಮಾಡಿದೆ ಎಂದು ನೊಂದ ಗ್ರಾಮಸ್ಥರು ತಿಳಿಸಿದ್ದಾರೆ .
ಬಿಸಿಲಿನ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಕುರಿ, ಜಾನುವಾರಗಳು ಹಾಗೂ ಯುವಕನ ಮೇಲೆ ಮೊಸಳೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ, ಈ ಘಟನೆಯಿಂದ ಭಯಯಭೀತರಾದ ಗ್ರಾಮಸ್ಥರು ಮೊಸಳೆಯನ್ನು ಹಗ್ಗದಿಂದ ಕಟ್ಟಿ ಹಾಕಿ, ಕುರುಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತುಂಗಭದ್ರಾ ಜಲಾಶಯದಿಂದ ಮೊಸಳೆ ಬಂದಿರಬಹುದು ಎಂದು ಸಂಶಯ ವ್ಯಕ್ತವಾಗಿದೆ ಎಂದು ತಿಳೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
