ಆನಂದ್​ ಸಿಂಗ್-ಗಣೇಶ್ ಭೇಟಿ : 1 ಗಂಟೆಗೂ ಅಧಿಕ ಕಾಲ ಚರ್ಚೆ

ಹೊಸಪೇಟೆ 

     ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಾನೇ ಜೈಲಿನಿಂದ ಹೊರ ಬಂದಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್​, ಇಂದು ವಿಜಯನಗರ ಶಾಸಕ ಆನಂದ್​ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಹೊಸಪೇಟೆಯ  ವೇಣುಗೋಪಾಲ ದೇವಸ್ಥಾನದಲ್ಲಿ ಭೇಟಿ ಮಾಡಿದ ಗಣೇಶ್, ಆನಂದ ಸಿಂಗ್ ಅವರ ತಂದೆ ಪೃಥ್ವಿರಾಜ್‌ ಸಿಂಗ್​​ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಅಲ್ಲದೇ, ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ಈ ಘಟನೆ ನಡೆದಿದೆ.

ಆನಂದ್ ಸಿಂಗ್ ಪರಮಾಪ್ತ ಸಮೀವುಲ್ಲಾ ಮಧ್ಯಸ್ಥಿಕೆ

        ನಂತರ ಹೊಸಪೇಟೆಯ ಪಟೇಲ್ ನಗರದಲ್ಲಿರುವ ಕೃಷ್ಣಾ ಮಂದಿರದಲ್ಲಿ ಆನಂದ್​ ಸಿಂಗ್ ಹಾಗೂ ಗಣೇಶ್ ನಡುವೆ ಒಂದು ಗಂಟೆಗೂ ಹೆಚ್ಚು ಹೊತ್ತು ಮಾತುಕತೆ ನಡೆದಿದೆ ಎನ್ನಲಾಗಿದೆ. ಇನ್ನು ಕಮಲಾಪುರ ಮೂಲದ ಆನಂದ್ ಸಿಂಗ್ ಪರಮಾಪ್ತ ಸಮೀವುಲ್ಲಾ ಮಧ್ಯಸ್ಥಿಕೆಯಿಂದಾಗ ಈ ಭೇಟಿ ಸಾಧ್ಯವಾಗಿದ್ದು ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಇನ್ನು ಈ ಹಿಂದೆ ಆನಂದ್​ಸಿಂಗ್ ಮೇಲೆ ಗಣೇಶ್ ಹಲ್ಲೆ ನಡೆಸಿದ್ರು ಎಂಬ ಆರೋಪ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link