ಹುಳಿಯಾರು
ಸಮೀಪದ ಹೊಸದುರ್ಗ ತಾಲ್ಲೂಕಿನ ಶ್ರೀಕ್ಷೇತ್ರ ಬೆಲಗೂರಿಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸೋಮವಾರ ಭೇಟಿ ನೀಡಿದರು. ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಬೆಲಗೂರಿನ ವೀರ ಪ್ರತಾಪ ಆಂಜನೇಯ ಸ್ವಾಮಿ ದರ್ಶನಾರ್ಥವಾಗಿ 12 ಗಂಟೆ ಸುಮಾರಿಗೆ ಆಗಮಿಸಿದ ಅವರನ್ನು ದೇವಾಲಯ ಸಮಿತಿಯಿಂದ ವೇದ ಘೋಷದೊಂದಿಗೆ ಸ್ವಾಗತಿಸಲಾಯಿತು.
ಶ್ರೀ ವೀರಪ್ರತಾಪ ಆಂಜನೇಯ ಸನ್ನಿಧಿಯಲ್ಲಿ ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಿದ ದಂಪತಿಗಳು ಗಂಟೆಗಳಿಗೂ ಹೆಚ್ಚು ಕಾಲ ಸನ್ನಿಧಿಯಲ್ಲಿ ಕಾಲ ಕಳೆದು ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾದರು. ಅವಧೂತರಾದ ಶ್ರೀ ಬಿಂದು ಮಾಧವ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಪ್ರಸಾದ ಸ್ವೀಕರಿಸಿ ಅಲ್ಲಿಂದ ಶಿವಮೊಗ್ಗದಿಂದ ಆಗಮಿಸಿ ಶಿರಸಿಗೆ ತೆರಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
