ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ : ಡಿ. ಹೆಚ್. ಶಂಕರಮೂರ್ತಿ

ಬೆಂಗಳೂರು:

       ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ ತೀವ್ರ ಸಂತಾಪ ಸೂಚಿಸಿದ್ದಾರೆ. ಮನಸ್ಸಿಗೆ ತುಂಬಾ ಆಘಾತವಾಗಿದೆ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

       ದೂರವಾಣಿ ಮೂಲಕ ಮಾತನಾಡಿದ ಅವರು, ಇಂದು ರಾಜ್ಯದಲ್ಲಿ ಪಕ್ಷ ಈ ಮಟ್ಟಕ್ಕೆ ತಲುಪುವಲ್ಲಿ ಅನಂತ್ ಕುಮಾರ್ ಕೂಡ ಪ್ರಮುಖ ಕಾರಣಕರ್ತರು. ಅವರ ಆರೋಗ್ಯ ಸುಧಾರಣೆಯಾಗಲಿದೆ, ಪಕ್ಷ ಕಟ್ಟುವಲ್ಲಿ ಮತ್ತೆ ಸಹಕಾರ ನೀಡಲಿದ್ದಾರೆ ಎನ್ನುವ ನಮ್ಮ ನಿರೀಕ್ಷೆ ಹುಸಿಯಾಗಿದೆ. ಅವರ ಅಗಲಿಕೆಯಿಂದ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಅಗಲಿದ ಹಿರಿಯ ಚೇತನಕ್ಕೆ ಶಾಂತಿ ಸಿಗಲಿ ಎಂದಷ್ಟೇ ಹೇಳಬಲ್ಲೆ ಎಂದರು.

       ಎಬಿವಿಪಿಯಲ್ಲಿ ಕೆಲಸ ಮಾಡಿದ್ದ ಅನಂತ್, ಪಕ್ಷ ಬಡವಾಗಿದ್ದಾಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿ ಪಕ್ಷ ಸಂಘಟನೆ ಮಾಡಿದ್ದರು. 1983ರಿಂದ ಒಟ್ಟಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಏಳೆಂಟು ಖಾತೆ ನಿರ್ವಹಣೆ ಮಾಡಿದ್ದಾರೆ. ಆದರೆ ಅವರನ್ನು ಇಷ್ಟು ಬೇಗ ಕಳೆದುಕೊಂಡಿದ್ದೇವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap