ಮಾಧ್ಯಮಗಳಿಗೂ ಲಾಕ್ ಡೌನ್ ಹೇರಬೇಕು : ಡಾ.ಗಂಗಾಧರ್

ಬೆಂಗಳೂರು:

     ಕಳೆದ ಮೂರುವರೆ ತಿಂಗಳುಗಳಿಂದ ಕೊರೋನಾ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳಿಗೂ ಲಾಕ್ ಡೌನ್ ಬೇಕಾಗಿದೆ, ಏಕೆಂದರೆ ಅತಿಯಾದ ಸುದ್ದಿಯಿಂದ ಸಾರ್ವಜನಿಕರ ಕುತೂಹಲ ಮತ್ತಷ್ಚು ಹೆಚ್ಚುತ್ತದೆ ಇದರಿಂದ ಕೆಲ ವಿಪರೀತ ಪರಿಣಾಮಗಳು ಸಂಭವಿಸಿದರೂ ಆಶ್ಚರ್ಯವಿಲ್ಲ. ವಿಕಾಸ್ ದುಬೆ ಹೊರತುಪಡಿಸಿ ಮಾಧ್ಯಮಗಳಲ್ಲಿ ಕೋವಿಡ್ ಹೊರತುಪಡಿಸಿ ಬೇರೆ ಯಾವುದೇ ಸುದ್ದಿ ಬಂದಿಲ್ಲ. ಹಾಗಾಗಿ ಸಮತೋಲನ ಅಗತ್ಯ ಎಂದು ನಿಮ್ಹಾನ್ಸ್ ನಿರ್ದೇಶಕ ಡಾ.ಗಂಗಾಧರ್ ಅಭಿಪ್ರಾಯಪಟ್ಟಿದ್ದಾರೆ. 

  ಕಳೆದ ಕೆಲವು ತಿಂಗಳುಗಳಿಂದ ಕೊರೋನಾ ಬಗ್ಗೆ ಅರಿವು-ಜಾಗೃತಿ ಹಾಗೂ ಜನರಿಗೆ ಮಾಹಿತಿ ನೀಡುವಲ್ಲಿ ಮಾಧ್ಯಮಗಳು ಉತ್ತಮ ಕೆಲಸ ಮಾಡುತ್ತಿವೆ ಎಂದು ಆದರೆ ಬಿತ್ತರಿಸುವ ಸುದ್ದಿಯಲ್ಲಿ ಸಮತೋಲನ ಅಗತ್ಯ ಎಂದು ನಿಮ್ಹಾನ್ಸ್ ತಜ್ಞ ವೈದ್ಯರಾದ ಡಾ.ಕೆಎಸ್ ಚತುರ್ವೇದಿ ಹೇಳಿದ್ದಾರೆ.  

   ಕೋವಿಡ್ ಎಲ್ಲರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಿರುವ ಅವರು ಮನೆಯ ಪರಿಕಲ್ಪನೆಯು ಕಳೆದುಹೋಗಿದೆ ಏಕೆಂದರೆ ಮನೆ ಒಂದು ಕುಟುಂಬಕ್ಕೆ ಕೆಲಸದ ಸ್ಥಳ, ಜಿಮ್ ಮತ್ತು ಶಾಲೆಯಾಗಿ ಮಾರ್ಪಟ್ಟಿದೆ. ಮಾಧ್ಯಮದವರು ಕೂಡ ಒತ್ತಡದಲ್ಲಿದ್ದಾರೆ. ಕೋವಿಡ್ ಪ್ರಕರಣಗಳ ಬಗ್ಗೆ ವರದಿ ಮಾಡುವ ಕಾಯಕದಲ್ಲಿರುತ್ತಾರೆ ಎಂದು ಡಾ.ಚತುರ್ವೇದಿ ಹೇಳಿದರು.

    ಈ ಕಳಂಕವು ಸಾಮಾಜಿಕ ಒಗ್ಗಟ್ಟನ್ನು ಹಾಳು ಮಾಡುತ್ತದೆ ಮತ್ತು ಜನರು ಆರಂಭಿಕ ಪರೀಕ್ಷೆಗೆ ಹೋಗುವುದನ್ನು ತಡೆಯುತ್ತದೆ. ಸೋಂಕು, ಚೇತರಿಕೆಯ ಪ್ರಮಾಣ ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸರಿಯಾದ ಮಾಹಿತಿ ನೀಡಲು ಮಾಧ್ಯಮ ಮಾತ್ರ ಸಹಾಯ ಮಾಡುತ್ತದೆ ಎಂದು ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ನವೀನ್ ಕುಮಾರ್ ತಿಳಿಸಿದ್ದಾರೆ.

    ಇಂತಹ ಸಮಯದಲ್ಲಿ ಮಾಧ್ಯಮಗಳ ಪಾತ್ರ ಮಹತ್ವವಾಗಿದೆ ,ಅವರು ಸತ್ಯ ಹೇಳಬೇಕು ಮತ್ತು ಕಿಲ್ಲರ್ ವೈರಸ್ ಸೂಪರ್ ಸ್ಪ್ರೆಡರ್‌ಗಳು ಎಂಬ ಭಯಾನಕ ವಿಶೇಷಣಗಳನ್ನು ಬಳಸಬಾರದು ಎಂದು ನಿಮ್ಹಾನ್ಸ್ ವೈದ್ಯೆ ಡಾ.ಕೆಎಸ್ ಮೀನಾ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap