ಬೆಂಗಳೂರು
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆರೋಗ್ಯಭಾಗ್ಯ ಯೋಜನೆಯಡಿ, ಆಸ್ಪತ್ರೆಗಳು ಚಿಕಿತ್ಸೆ ನೀಡುವಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿವಿಧ ಆರೋಗ್ಯ ಸೇವೆಗಳನ್ನು ಪಡೆಯಲು ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಕ್ಯಾನ್ಸರ್ ಮೊದಲಾದ ಕಾಯಿಲೆಗಳಿಗೂ ಸಹ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ನಿಯಮಗಳನ್ನು ಜಾರಿಗೊಳಿಸಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








