ಹರಪನಹಳ್ಳಿ:
ತಾಲ್ಲೂಕಿನ ನಂದಿಬೇವೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಉಮಾ ಅವರ ವಿರುದ್ಧ ಮಂಡಿಸಿದ ಅವಿಶ್ವಾಸ ಗೊತ್ತುವಳಿಗೆ ಶನಿವಾರ ಜಯ ಸಿಕ್ಕಿದೆ.ಒಟ್ಟು 19 ಸದಸ್ಯರ ಪೈಕಿ 16 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಬೆಂಬಲ ವ್ಯಕ್ತಪಡಿಸಿದ್ದರಿಂದ ಅಧ್ಯಕ್ಷರ ವಿರುದ್ಧದ ನಿರ್ಣಯಕ್ಕೆ ಜಯ ದೊರಕಿದೆ ಎಂದು ಅವಿಶ್ವಾಸ ಗೊತ್ತುವಳಿ ಸಭೆ ಅಧ್ಯಕ್ಷತೆ ವಹಿಸಿದ್ದ ಉಪ ವಿಭಾಗಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ತಿಳಿಸಿದ್ದಾರೆ.
ಹಿನ್ನೆಲೆ:
2018ರ ಆ.3ರಂದು ನಡೆದಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆಯಲ್ಲಿ ಅಧ್ಯಕ್ಷೆ ಕೆ.ಉಮಾ ಅವರು ಅಧಿಕಾರ ಕಳೆದುಕೊಂಡಿದ್ದರು. ಈ ನಿರ್ಣಯದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಅವರಿಗೆ ಮಾ.12ರಂದು ಪುನಃ ಅಧಿಕಾರ ಸ್ವೀಕರಿಸುವಂತೆ ಆದೇಶ ನೀಡಿತ್ತು. ಮತ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅಧ್ಯಕ್ಷರ ವಿರುದ್ಧ ಶನಿವಾರ ಮಂಡಿಸಲಾದ ಅವಿಶ್ವಾಸ ಗೊತ್ತುವಳಿಗೆ ಜಯ ಸಿಕ್ಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
