ಬೆಂಗಳೂರು:
ಕಾಂಗ್ರೆಸ್ ಶಾಸಕರಾದ ಬಿ. ನಾಗೇಂದ್ರರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೊಲೀಸರು ವಶಕ್ಕೆ ನೀಡಿದೆ. ಅಕ್ರಮ ಗಣಿಗಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಷ್ಟೇ ನೋಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ನಾಗೇಂದ್ರ ಗೈರಾದ ಹಿನ್ನೆಲೆಯಲ್ಲಿ ಗರಂ ಆಗಿದ್ದ ನ್ಯಾಯಾಲಯವೂ ನಾಗೇಂದ್ರ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ . ಈ ಹಿನ್ನೆಲೆ ನಾಗೇಂದ್ರ ಜಾಮೀನು ರಹಿತ ವಾರಂಟ್ ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ಗೆ ಹಾಜರಾದಾಗ ಕೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಶಾಸಕ ಬಿ.ನಾಗೇಂದ್ರ ಕೋರ್ಟ್ ಬಳಿ ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/20bg_bgadb_mlaa21BG-NAGEND.gif)