ಪೊಲೀಸರ ಅಥಿತಿಯಾದ ಬಿ.ನಾಗೇಂದ್ರ…!!!

ಬೆಂಗಳೂರು:

      ಕಾಂಗ್ರೆಸ್ ಶಾಸಕರಾದ ಬಿ. ನಾಗೇಂದ್ರರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೊಲೀಸರು ವಶಕ್ಕೆ ನೀಡಿದೆ. ಅಕ್ರಮ ಗಣಿಗಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಷ್ಟೇ ನೋಟೀಸ್​ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಕೋರ್ಟ್​ ಪೊಲೀಸರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.

     ವಿಚಾರಣೆ ವೇಳೆ ನಾಗೇಂದ್ರ ಗೈರಾದ ಹಿನ್ನೆಲೆಯಲ್ಲಿ ಗರಂ ಆಗಿದ್ದ ನ್ಯಾಯಾಲಯವೂ​ ನಾಗೇಂದ್ರ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ . ಈ ಹಿನ್ನೆಲೆ ನಾಗೇಂದ್ರ ಜಾಮೀನು ರಹಿತ​ ವಾರಂಟ್​ ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್​​ಗೆ ಹಾಜರಾದಾಗ ಕೋರ್ಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಶಾಸಕ ಬಿ.ನಾಗೇಂದ್ರ ಕೋರ್ಟ್ ಬಳಿ ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap