ಪ್ರಾಮಾಣಿಕವಾಗಿ ಸೇವೆಸಲ್ಲಿಸಿ ಜನರಿಗೆ ಹತ್ತಿರವಾಗಿ : ಕುಮಾರಸ್ವಾಮಿ

ಬೆಂಗಳೂರು

       ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಸಾಮಾನ್ಯರಿಗೆ ಹತ್ತಿರವಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

        ಅವರು ನಗರದ ಜಯದೇವ ಆಸ್ಪತ್ರೆಯ 300 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ನೂತನ ಕಟ್ಟಡ ಶಂಕು ಸ್ಥಾಪನೆ ನರವೇರಿಸಿ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನ ಸಾಮಾನ್ಯರಿಗೆ ಇರುವ ಕೀಳರಮೆ ಅನುಮಾನ ಕಡಿಮೆಯಾಗುವ ರೀತಿಯಲ್ಲಿ ಉತ್ತಮ ಸೇವೆ ಸಲ್ಲಿಸಲು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ವೈದ್ಯರು ಮುಂದಾಗಬೇಕು ಎಂದರು.

        ರೋಗಿಗಳು ಬಂದಾಗ ಹಣಕ್ಕೆ ಆಸೆ ಪಡದೆ ಚಿಕಿತ್ಸೆಗೆ ಆದ್ಯತೆ ನೀಡುವ ಜಯದೇವ ಆಸ್ಪತ್ರೆಗೆ ಸಮನಾಗಿ ಕಾರ್ಯನಿರ್ವಹಿಸಲು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಸಾಧ್ಯವಿಲ್ಲ.ಕಳೆದ ಕೆಲ ತಿಂಗಳಿನಿಂದ ಜಯದೇವ ಸಂಸ್ಥೆ ನಿರ್ದೇಶಕರು ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ತಕ್ಷಣ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

        ರೋಗಿಗಳು ಬಂದಾಗ ಹಣಕ್ಕೆ ಆಸೆ ಪಡದೆ ಚಿಕಿತ್ಸೆಗೆ ಆದ್ಯತೆ ನೀಡುವ ಸಂಸ್ಥೆ ಜಯದೇವ ಆಸ್ಪತ್ರೆಯಾಗಿದ್ದು ರಾಜ್ಯಕ್ಕೆ ದೇಶದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲೂ ಹೆಸರು ತಂದಿರುವ ಪ್ರತಿಷ್ಠಿತ ಸಂಸ್ಥೆ ಎಂದು ಬಣ್ಣಿಸಿದರು.ಇನ್ಫೋಸಿಸ್ ಮುಖ್ಯಸ್ಥರಾದ ಸುಧಾಮೂರ್ತಿ ಅವರು ಆಸ್ಪತ್ರೆಗೆ ಹೆಚ್ಚಿನ ಹಾಸಿಗೆ ಇರುವ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಕೇವಲ ಒಂದೇ ವಾರದಲ್ಲಿ ನೀಲನಕ್ಷೆ ತಯಾರಿಸಿ ನೆರವಿಗೆ ಧಾವಿಸಿದ್ದಾರೆಂದು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap