ಬೆಂಗಳೂರು:
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ -2 ಚಿತ್ರದ ಸೆಟ್ ಬೆಂಕಿ ಆಹುತಿಯಾದ ಕಾರಣ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನಿರ್ದೇಶಕ ತಿಳಿಸಿದ್ದಾರೆ.
ಈ ಅವಘಡವೂ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ತಿಳಿದು ಬಂದಿದ್ದು, ಭಜರಂಗಿ -2 ಚಿತ್ರತಂಡ ಅನಾಹುತದಿಂದ ಪಾರಾಗಿದೆ. ಸಿನೆಮಾ ಸೆಟ್ನಲ್ಲಿ 300ಕ್ಕೂ ಹೆಚ್ಚು ಸಹ ಕಲಾವಿದರು ಪಾಲ್ಗೊಂಡಿದ್ದರು ಎನ್ನಲಾಗಿದೆ ಬೆಂಕಿ ಕಾಣಿಸಿಕೊಂಡ ತಕ್ಷಣ ಕಲಾವಿದರೆಲ್ಲಾ ಹೊರ ಓಡಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆಗ್ನಿಶಾಮಕ ಸಿಬ್ಬಂದಿ ಧಾವಿಸಿ 4 ಗಂಟೆಗಳ ಕಾಲ ಸತತವಾಗಿ ಶ್ರಮಿಸಿ ಬೆಂಕಿ ನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/Bhajarangi-222-800x445.gif)