ಹುಳಿಯಾರಿನಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

ಹುಳಿಯರು

      ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮಂಗಳವಾರ ಕರೆ ನೀಡಲಾಗಿದ್ದ ಭಾರತ್ ಬಂದ್ ಗೆ ಹುಳಿಯಾರು ಪಟ್ಟಣದಲ್ಲಿ ಯಾವುದೇ ಬೆಂಬಲ ದೊರೆಯದೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

      ಬಸ್ ಸಂಚಾರ ಹೊರತು ಪಡಿಸಿ ಯಾವುದೇ ಸೇವೆಗಳಲ್ಲಿ ವ್ಯತ್ಯಯವಾಗದೆ ಎಲ್ಲಾ ಸೇವೆಗಳು ಎಂದಿನಂತಿತ್ತು. ಅಂಗಡಿ ಮುಗ್ಗಟ್ಟುಗಳು, ಕಛೇರಿಗಳು ಎಂದಿನಂತೆ ತೆರೆದಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಮಕ್ಕಳ ಓಡಾಟ ಇಲ್ಲದಾಗಿತ್ತು.

       ಮುಂಚಿತವಾಗಿಯೇ ಬಂದ್ ಬಗ್ಗೆ ತಿಳಿದಿದ್ದರಿಂದ ಪ್ರಯಾಣಿಕರು ಕೂಡ ಹೆಚ್ಚಾಗಿ ಕಂಡುಬರಲಿಲ್ಲ. ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದ್ದರಿಂದ ಬಹುತೇಕ ಖಾಸಗಿ ಬಸ್‍ಗಳು ಸಂಚರಿಸಲಿಲ್ಲ. ಮಧ್ಯಾಹ್ನದ ನಂತರ ಆಲ್ಲೊಂದು ಇಲ್ಲೊಂದು ಖಾಸಗಿ ಬಸ್ಸುಗಳು ಓಡಾಡುತ್ತಿದ್ದವು.

        ಆಟೋಗಳು ಸಹ ವಿರಳವಾಗಿತ್ತು. ಬಸ್ ನಿಲ್ದಾಣ ಹಾಗೂ ಮಾರಕಟ್ಟೆಯಲ್ಲಿ ಜನಸಂದಣಿ ವಿರಳವಾಗಿತ್ತು. ಬ್ಯಾಂಕ್ ಹಾಗೂ ಅಂಚೆ ಸೇವೆ ಎಂದಿನಂತೆ ನಡೆಯುತ್ತಿತ್ತು. ಇದನ್ನು ಹೊರತುಪಡಿಸಿ ಎಲ್ಲಾ ಅಗತ್ಯ ವಸ್ತುಗಳ ಸೇವೆ ಲಭ್ಯವಿತ್ತು. ಒಟ್ಟಾರೆ ಬಂದ್ ವಿಫಲವಾಯಿತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link