ಬೆಂಗಳೂರು:

ಒಂದು ಸಾರಿ ಭಾರತ್ ಬಂದ್ ಆದರೆ ಎಷ್ಟು ನಷ್ಟ ಆಗುತ್ತದೆ ಎಂದು ತಿಳಿದಿರುವ ಮಹಾನ್ ಅರ್ಥ ಶಾಸ್ತ್ರಜ್ಞರೇ ತುಂಬಿರುವ ನಮ್ಮ ದೇಶದಲ್ಲಿ ಬಂದ್ ಮಾಡುವುದು ಒಂದು ಪ್ಯಾಷನ್ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಿನ್ನೆ ಮೊನ್ನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ನಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ಆರ್ಥಿಕ ಇಲಾಖೆಯ ಮೂಲಗ ಳು ತಿಳಿಸಿವೆ.
ಕಾರ್ಮಿಕ ನೀತಿ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್ ನಿಂದಾಗಿ ಜನ ಜೀವನ ಅಸ್ಥವ್ಯಸ್ಥಗೊಂಡಿದ್ದು ಮಾತ್ರವಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 29 ಸಾವಿರ ಕೋಟಿಗಳಷ್ಟು ನಷ್ಟವಾಗಿದೆ ಎಂದು ವರದಿಗಳು ತಿಇಳಿಸಿವೆ.
ಪ್ರಮುಖವಾಗಿ ದೇಶಾದ್ಯಂತ ನಡೆದ ಬಂದ್ ನಿಂದಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದ್ದು, ರಾಜ್ಯದಲ್ಲಿ ನಡೆದ ಬಂದ್ ನಿಂದಾಗಿ ರಾಜ್ಯ ಸರ್ಕಾರಕ್ಕೆ ಸುಮಾರು 1100 ಕೋಟಿ ರೂಗಳು ನಷ್ಟವಾಗಿದೆ ಎಂದು ತಿಳಿದುಬಂದಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
