ದಾವಣಗೆರೆ:
ನಗರದ ಪ್ರೌಢಶಾಲಾ ಮೈದಾನದಲ್ಲಿ 2.18 ಕೋಟಿ ರೂ. ವೆಚ್ಚದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲುದ್ದೇಶಿಸಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಭಾನುವಾರ ಸಂಸದ ಜಿ.ಎಂ.ಸಿದ್ದೇಶ್ವರ ಭೂಮಿ ಪೂಜೆ ನೆರವೇರಿಸಿದರು.
ಈಗಿರುವ ಹಳೇ ಬಸ್ ನಿಲ್ದಾಣವನ್ನು ಮೂರು ತಿಂಗಳ ಅವಧಿಗೆ ನಗರದ ಪ್ರೌಢಶಾಲಾ ಮೈದಾನಕ್ಕೆ ಸ್ಥಳಾಂತರಿಸಲುದ್ದೇಶಿಸಲಾಗಿದ್ದು, ಇಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ 2.18 ಕೋಟಿ ರೂ. ವೆಚ್ಚದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ಸುಮಾರು 6,640 ಚದರ ಮೀಟರ್ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈ ಬಸ್ ನಿಲ್ದಾಣದಲ್ಲಿ 98 ಶೆಡ್ ಹಾಗೂ 20 ಆಸನದ ವ್ಯವಸ್ಥೆ ಮಾಡಲಾಗುವುದು. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 12.60 ಕೋಟಿ ರೂ. ವೆಚ್ಚದಲ್ಲಿ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಬಿಲ್ಡಿಂಗ್ ನಿರ್ಮಾಣಕ್ಕೂ ಸಂಸದ ಜಿ.ಎಂ. ಸಿದ್ದೇಶ್ವರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಬಿಜೆಪಿ ಮುಖಂಡರಾದ ಎಂ.ಮನು, ಶಿವರಾಜ್ ಪಾಟೀಲ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/23_dvg_02.gif)