ಅರ್ಜುನ್ ಸರ್ಜಾ ಪ್ರಕರಣಕ್ಕೆ ರೋಚಕ ತಿರುವು ಕೊಟ್ಟ ಹನುಮಂತ…!!

ಬೆಂಗಳೂರು:
       ಅರ್ಜುನ್ ಸರ್ಜಾ ವಿರುದ್ಧ #MeToo  ಎಂದಿರುವ ಶ್ರುತಿ ಹರಿಹರನ್ ಈ ವಿಚಾರದಲ್ಲಿ ಇನ್ನೊಂದು ಮಹತ್ವದ ಬೆಳವಣಿಗೆ ಕಾರಣವಾಗಿದ್ದಾರೆ . ಅ.25ರ ಮಧ್ಯರಾತ್ರಿ ಅರ್ಜುನ್ ಸರ್ಜಾರವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಶ್ರುತಿ ಹರಿಹರನ್ ಬೆಂಗಳೂರು ಹೈಗ್ರೌಂಡ್ಸ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
       ಜೀವ ಬೆದರಿಕೆ ಹಾಗೂ ಖಾಸಗಿತನಕ್ಕೆ ಧಕ್ಕೆ ಆರೋಪದಡಿ ಪ್ರಕರಣದಡಿ ದೂರು ದಾಖಲಾಲ್ಗಿದೆ. ಪ್ರಶಾಂತ್ ವಿರುದ್ಧ ಶ್ರುತಿ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ.
ಬಿಗ್ ಟ್ವಿಸ್ಟ್:

   

    ಅರ್ಜುನ್ ಸರ್ಜಾ ವಿರುದ್ಧದ ಮೀ ಟೂ ಆರೋಪ ಹಿಂದೂ ವಿರೋಧಿ ಸಂಚಿನ ಒಂದು ಭಾಗ. ಸರ್ಜಾ ಅವರು ಚೆನ್ನೈನಲ್ಲಿ 25 ಕೋಟಿ ವೆಚ್ಚದ ಹನುಮಾನ್ ಮಂದಿರ ನಿರ್ಮಿಸುತ್ತಿದ್ದು, ಇದನ್ನು ಕ್ರೈಸ್ತ ಮಿಷನರಿಗಳು ಸೇರಿ ಹಲವರು ವಿರೋಧಿಸುತ್ತಿದ್ದಾರೆ. ಆ ಜಾಲದ ಕುಮ್ಮಕ್ಕಿನಿಂದಲೇ ಕಮ್ಯುನಿಸ್ಟ್ ಮನಸ್ಥಿತಿಯ ಶ್ರುತಿ ಹರಿಹರನ್ ‘ದೇಶದ್ರೋಹ’ದ ಕೆಲಸದಲ್ಲಿ ಭಾಗಿಯಾಗಿದ್ದಾರೆ.

        ಇದಕ್ಕೆ ಇಬ್ಬರು ಸ್ಟಾರ್ ನಟರ ಬೆಂಬಲವೂ ಇದೆ ಎಂದು ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ದಾರೆ. ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಶ್ರುತಿ ಹರಿಹರನ್ ಮಾಡಿರುವ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಮನಸ್ಸುಗಳು ಕೆಲಸ ಮಾಡುತ್ತಿವೆ. ಇವರ ಸಂಚುಗಳಿಗೆ ಮೀಟೂ ಅಭಿಮಾನ ಬಳಕೆ ಆಗುತ್ತಿದೆ ಎಂದು ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ಗಂಭೀರವಾಗಿ ಆರೋಪಿಸಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕರೆದಿದ್ದ ಮೀಟೂ ಸಂಧಾನ ಸಭೆಗೆ ಆಗಮಿಸಿದ್ದ ಪ್ರಶಾಂತ್ ಸಂಬರಗಿ ಸಭೆ ಆರಂಭವಾಗುವುದಕ್ಕೂ ಮುನ್ನ ಈ ಕುರಿತು ಮಾತನಾಡಿದರು. ಅರ್ಜುನ್ ಸರ್ಜಾ ಆಂಜನೇಯನ ಪರಮ ಭಕ್ತರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link