ಹುಳಿಯಾರು:
ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಳಿಯಾರು ಸಮೀಪದ ದೊಡ್ಡ ಎಣ್ಣೆಗೆರೆ ಗೇಟ್ ಬಳಿ ನಡೆದಿದೆ.
ಸಾವಿಗೀಡಾದ ದುರ್ದೈವಿಯನ್ನು ದೊಡ್ಡಎಣ್ಣೆಗೆರೆ ಗ್ರಾಮದ ನಿವಾಸಿ ದೇವರಾಜು (45) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಗೆ ಟಿವಿಎಸ್ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಆತನ ಮೇಲೆ ಹರಿದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಖಾಸಗಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಂದನಕೆರೆ ಪಿಎಸ್ಐ ನರಸಿಂಹಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.