ತುಮಕೂರು:
ಜಿಲ್ಲೆಯಲ್ಲಿ ಕೋವಿಡ್ 19 ಸೋಕಿತರಿಗೆ ದೊರೆಯುತ್ತಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಖುದ್ದು ತಿಳಿಯುವ ನಿಟ್ಟಿನಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಹಾಗು ಕುಣಿಗಲ್ ಶಾಸಕ ಡಾ.ರಂಗನಾಥ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ ಟಿ.ಇ.ವೀರಭದ್ರಯ್ಯ ಅವರೊಂದಿಗೆ ಕೋವಿಡ್ ಆಸ್ಪತ್ರೆಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಮಾತನಾಡಿಸಿದ ಇರ್ವರು ಮುಖಂಡರು,ರೋಗಿಗಳು ಆತ್ಮ ಸ್ಥೈರ್ಯ ಕಳೆದು ಕೊಳದೆ.ಸದಾ ಚಟುವಟಿಕೆಯಿಂದ ಇರುವಂತೆ ಸಲಹೆ ನೀಡಿದರು.
ಕೋರೋನಾ ಮಹಾಮಾರಿಯಿಂದಾಗಿ ಇಡೀ ವಿಶ್ವವೇ ತಲ್ಲಣಿಸುತ್ತಿಸುತ್ತಿರುವ ಈ ಕಾಲದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿ.ಎಸ್.ಯಡಿಯೂರಪ್ಪ ನೇತ್ವತದ ಸರಕಾರ ಪಿಪಿಇ ಕಿಟ್, ಸಾನಿಟೈಜರ್,ವೆಂಟಿಲೇಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಖಂಡನೀಯ, ಕೂಡಲೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ರಾಮಕೃಷ್ಣ ಒತ್ತಾಯಿಸಿದರು ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ರಾದ ನಂತರ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡುತಿದ್ದು, ಬಿಜೆಪಿಯ ಕೋವಿಡ್ ಹಗರಣವನ್ನು ಜನರಿಗೆ ತಲುಪಿಸಲಿದೆ ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/covid-19-hagarna.gif)