ವೈಯ್ಯಾಲಿಕಾವಲ್ ವ್ಯಾಪ್ತಿಯಲ್ಲಿ ಯುವಕನ ಬರ್ಬರ ಹತ್ಯೆ..!!!

ಬೆಂಗಳೂರು

     ಯುವಕನೊಬ್ಬನನ್ನು ಮಚ್ಚು, ಲಾಂಗ್‍ಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

      ಮಲ್ಲೇಶ್ವರಂನ ಮುನೇಶ್ವರ ಲೇಔಟ್‍ನ ಗಣೇಶ್ (31)ಎಂದು ಕೊಲೆಯಾದವರನ್ನು ಗುರುತಿಸಲಾಗಿದೆ. ಮಲ್ಲೇಶ್ವರಂನ 9ನೇ ಕ್ರಾಸ್ ಬಳಿ ರಾತ್ರಿ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಗಣೇಶ್‍ನನ್ನು ಮಚ್ಚು, ಲಾಂಗ್‍ಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.ಎಲೆಕ್ಟ್ರೀಷನ್ ಕೆಲಸ ಮಾಡುತ್ತಿದ್ದ ಗಣೇಶ್ ಅವಿವಾಹಿತನಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

     ಇತ್ತೀಚೆಗೆ ಗಣೇಶ್, ಕೆಲಹುಡುಗರ ಜೊತೆ ಗಲಾಟೆ ಮಾಡಿಕೊಂಡಿದ್ದು, ಕೊಲೆಗೆ ಅದೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ.ಕೊಲೆ ನಡೆದ ಸ್ಥಳಕ್ಕೆ ಧಾವಿಸಿರುವ ವೈಯ್ಯಾಲಿಕಾವಲ್ ಪೆÇಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link