ಬೆಂಗಳೂರು
ರಾಜ್ಯಾದ್ಯಂತ ಬಿಎಸ್4 ವಾಹನ ನೊಂದಣಿಯನ್ನು ನಿಲ್ಲಿಸಲು ಆದೇಶ ನೀಡಿದ್ದ ಸರ್ಕಾರ ಏಪ್ರಿಲ್ 30ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಿನ್ನೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ಈ ಮೊದಲು31ರೊಳಗೆ ಬಿಎಸ್4 ವಾಹನ ನೋಂದಣಿ ಮಾಡಿಕೊಳ್ಳಬೇಕಿತ್ತು. ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆಗಿದೆ. ಈ ಕಾರಣಕ್ಕೆ ನೋಂದಣಿ ಸಮಯ ಏಪ್ರಿಲ್ 30ರವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿತ್ತು. ಕೇಂದ್ರದ ಮನವಿಗೆ ಸುಪ್ರೀಂಕೋರ್ಟ್ ಸಹಮತ ವ್ಯಕ್ತಪಡಿಸಿದೆ. ಹೀಗಾಗಿ ಬಿಎಸ್4 ವಾಹನ ಖರೀದಿಸಿದ ಗ್ರಾಹಕರು ಆತಂಕಕ್ಕೆ ಒಳಗಾಗಬಾರದು ಎಂದು ಭರವಸೆ ನೀಡಿದರು.ವಾಹನ ಖರೀದಿಸುವ ಗ್ರಾಹಕರು ಸಾರಿಗೆ ಇಲಾಖೆಗೆ ಇಮೇಲ್ ಮೂಲಕ ಮಾಹಿತಿ ನೀಡಬೇಕು ಎಂದರು. ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಈ ಮೊದಲು ಮಾರ್ಚ್ 31ರೊಳಗೆ ಬಿಎಸ್4 ವಾಹನ ನೋಂದಣಿ ಮಾಡಿಕೊಳ್ಳಬೇಕಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ