ಬಾಯ್ಕಾಟ್ ಚೀನಾ ಪ್ರಾಡಕ್ಟ್ಸ್: ಕೆಲವರಿಗೆ ಈಗ ಜ್ಞಾನೋದಯವಾಗದೆ: ಎಚ್ ಡಿ ಕೆ

ಬೆಂಗಳೂರು :

     ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು. ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

     ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದು. ಈ ಕೂಗು ಇತ್ತೀಚೆಗೆ ಹೆಚ್ಚು ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ”Compete With China’ ‘ ಎಂಬ ಯೋಜನೆಯನ್ನು ನಾನು ಸಿಎಂ ಆದಾಗ ರೂಪಿಸಲಾಗಿತ್ತು ಎಂದಿದ್ದಾರೆ.

     ‘Compete With China’ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು . ಇದಕ್ಕಾಗಿ ಕಲಬುರ್ಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳಲ್ಲಿ 9 ಕ್ಲಸ್ಟರ್‍ಗಳನ್ನು ಸ್ಥಾಪಿಸಲಾಗಿತ್ತು ಎಂದಿದ್ದಾರೆ.

      ಸ್ಥಳೀಯರಿಗೆ ಉದ್ಯೋಗ ಒದಗಿಸುವುದು, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆಯನ್ನು ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಯಶಸ್ವಿಯಾಗಿ ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು. ಆದರೆ, ಮೈತ್ರಿ ಸರ್ಕಾರದ ಈ ಯೋಜನೆಯನ್ನು ಇಂದಿನ ಸರ್ಕಾರ ಏನು ಮಾಡಿದೆ? ಮುಂದುವರೆಸಿಕೊಂಡು ಹೋಗಿದೆಯೋ ಇಲ್ಲವೋ ತಿಳಿಯದು ಎಂದು ಹೇಳಿದ್ದಾರೆ.

      ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು. ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap