ಬೆಂಗಳೂರು
ಭಾರತೀಯ ಟೆಕ್ ರಾಜಧಾನಿ ಎಂದೆ ಖ್ಯಾತವಾಗಿರುವ ಬೆಂಗಳೂರಿನ ಅಂದವನ್ನು ಇನ್ನೂ ಹೆಚ್ಚಿಸಲು ಮತ್ತೊಂದು ಆಕರ್ಷಣೆಸಿದ್ದವಾಗಿದ್ದು ಇದೇ 27ರಂದು ಉದ್ಗಾಟನೆಯಾಗಲಿದೆ .
ನೂರು ಅಡಿ ಎತ್ತರಕ್ಕೆ ಜೋಡಿಸಿಟ್ಟ ವಿಂಟೇಜ್ ಕಾರ್ ಗಳು. 3 ಸಾವಿರ ಜನರು ಒಟ್ಟಿಗೆ ಕುಳಿತು ಸಂಭ್ರಮಿಸಬಹುದಾದ ಅತ್ಯಾಧುನಿಕ ಸಾಮಗ್ರಿಗಳನ್ನು ಹೊಂದಿರುವ ಬಯಲು ರಂಗ ಮಂದಿರ. ಕಿವಿಗೆ ತಂಪು ನೀಡುವ ಹಕ್ಕಿಗಳ ಕಲವರವ.
ಸಮುದ್ರದ ಮರಳಿನ ಮೇಲೆ ಮಕ್ಕಳಿಗೆ ಕುಣಿದಾಡಲು ಅವಕಾಶ ಮಾಡಿ ಕೊಡುವ ಸ್ಯಾಂಡ್ ಪಿಟ್, ಆಮೆಗಳ ಹಾಗೂ ಮೊಲಗಳ ಸದ್ದು. ಇವು ಫೆಬ್ರವರಿ 27 ರಂದು ಬೊಮ್ಮನಹಳ್ಳಿಯಲ್ಲಿ ಉದ್ಘಾಟನೆಯಾಗಲಿರುವ ರಾಜ್ಯದ ಮೊದಲ “ಕಾರ್ ಪಾರ್ಕ್” ನ ಹೈಲೈಟ್ಸ್. ಬೆಂಗಳೂರಲ್ಲಿ ದೇಶದ ಮೊದಲ ಬಂಡೆ ಉದ್ಯಾನವನ ಸಾರ್ವಜನಿಕರಿಗೆ ಅನುಕೂಲವಾಗುವಂತ ಹದ್ದೇನಾದರೂ ನೀಡಲೇಬೇಕು ಎನ್ನುವ ಗುರಿ ಜನಪತ್ರಿನಿಧಿಗೆ ಇದ್ದರೆ ಹಲವಷ್ಟನ್ನು ಸಾಧಿಸಬಹುದು.ಕಸದಿಂದ ರಸ ಹಾಗೂ ಕಸದ ಕೊಂಪೆಯನ್ನು ಸ್ವರ್ಗಗೊಳಿಸಲು ತಮ್ಮ ತನು ಮನವನ್ನು ಮುಡಿಪಾಗಿಟ್ಟಿದ್ದಾರೆ ಬೊಮ್ಮನಹಳ್ಳಿ ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ