ರೇಣುಕಾಚಾರ್ಯ ವಿರುದ್ಧ ಕೇಸ್ ದಾಖಲು..!

ದಾವಣಗೆರೆ:

     ಕೊರೋನಾ ಚಿಕಿತ್ಸೆಗೆ ಸ್ಪಂದಿಸದ ತಬ್ಲಿಘಿಗಳನ್ನು  ಗುಂಡಿಕ್ಕಿ ಹತ್ಯೆ ಮಾಡಿದರು ತಪ್ಪಿಲ್ಲ ಎಂದು ನಾಲಿಗೆ ಹರಿಬಿಟ್ಟ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವವರು ದಾವಣಗೆರೆ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ. 

     ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಇತ್ತೀಚೆಗೆ ಮಾದ್ಯಮಗಳೊಂದಿಗೆ ಮಾತನಾಡುತ್ತಾ “ಚಿಕಿತ್ಸೆಗೆ ಸ್ಪಂದಿಸದ ತಬ್ಲಿಘಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದರೂ ತಪ್ಪಲ್ಲ” ಎಂದು ಹೇಳಿಕೆ ನೀಡಿದ್ದರು. 

     ಶಾಸಕರು ಸಮಾಜದಲ್ಲಿ ಶಾಂತಿ ಕದಡುವಂತಹಾ ಹೇಳಿಕೆ ನೀಡಿರುವ ಕಾರಣ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹಾಗೆಯೇ ಅವರನ್ನು ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಬೇಕು ಎಂದು ಸುಭಾಷ್ ಚಂದ್ರ ಒತ್ತಾಯಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap