ಗಾಂಧಿ ವೃತ್ತದಲ್ಲಿ ಸಿಹಿ ಹಂಚಿ ಬಿಜೆಪಿ ಸಂಭ್ರಮ

ಚಿತ್ರದುರ್ಗ:

   ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‍ನ ಬಿ.ಎನ್.ಚಂದ್ರಪ್ಪನವರ ವಿರುದ್ದ ಗೆಲವು ಸಾಧಿಸಿದ ಎ.ನಾರಾಯಣಸ್ವಾಮಿ ಪಕ್ಷದ ಮುಖಂಡರು, ಶಾಸಕರು ಹಾಗೂ ನೂರಾರು ಕಾರ್ಯಕರ್ತರೊಡನೆ ಗಾಂಧಿ ವೃತ್ತದಲ್ಲಿ ಸಂಭ್ರಮಿಸಿ ಸಂತಸ ಹಂಚಿಕೊಂಡರು.

    ಮತ ಎಣಿಕೆಯ ಆರಂಭದಿಂದಲೂ ಮುನ್ನಡೆ ಸಾಧಿಸಿಕೊಂಡು ಬಂದು ಎ.ನಾರಾಯಣಸ್ವಾಮಿ ಮಧ್ಯಾಹ್ನ3-30 ರ ಸುಮಾರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಅವರೊಡಗೂಡಿ ಗಾಂಧಿವೃತ್ತಕ್ಕೆ ತೆರಳಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿಕೊಂಡರು.

      ದೇಶದ ಪ್ರಧಾನಿ ನರೇಂದ್ರಮೋದಿರವರ ಸ್ವಚ್ಚ ಆಡಳಿತ ಹಾಗೂ ಐದು ವರ್ಷಗಳಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳ ಫಲವಾಗಿ ಇಂದು ರಾಜ್ಯದಲ್ಲಿ ಬಿಜೆಪಿ.24 ಸ್ಥಾನಗಳಲ್ಲಿ ಗೆಲ್ಲಲು ಕಾರಣವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಟಿ.ಜಿ.ನರೇಂದ್ರನಾಥ್, ಜಿ.ಎಂ.ಸುರೇಶ್, ಸಿದ್ದೇಶ್‍ಯಾದವ್ ಸೇರಿದಂತೆ ಅಪಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

      ಚಿತ್ರದುರ್ಗ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಜಯದ ನಗೆಬೀರಿದ ಬಿಜೆಪಿ.ಅಭ್ಯರ್ಥಿ ಎ.ನಾರಾಯಣಸ್ವಾಮಿ ಬಿಜೆಪಿ.ಕಾರ್ಯಾಲಯಕ್ಕೆ ಭೇಟಿ ನೀಡಿ ನಂತರ ಅಂಬೇಡ್ಕರ್ ಪ್ರತಿಮೆಗೆ ಹೂಮಾಲೆ ಅರ್ಪಿಸಿದರು.ಬೀರಾವರ ಪ್ರಕಾಶ್, ಜಯಣ್ಣ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಲ್ಲಂ ಸೀತಾರಾಂರೆಡ್ಡಿ, ಮುರಾರ್ಜಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. 

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap