ಸೋಮವಾರ ಸಿಎಂರಿಂದ ಮಾಹಿತಿ ಪಡೆಯಲಿರುವ ಕೇಂದ್ರ ತಂಡ

ಬೆಂಗಳೂರು

     ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆ ಮತ್ತು ಕೃಷ್ಣಾ,ಗೋದಾವರಿ ಮತ್ತಿತರ ನದಿಗಳು ಉಕ್ಕಿಹರಿದ ಪರಿಣಾಮ ಉಂಟಾದ ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಕೇಂದ್ರದ ಆರು ಜನರ ತಂಡ ರಾಜ್ಯ ವಿವಿಧ ಭಾಗಗಳಲ್ಲಿ ಅಧ್ಯಯನ ನಡೆಸಲಿದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ತಂಡ ಸಭೆ ನಡೆಲಿದ್ದು, ಪ್ರವಾಹ ಪರಿಸ್ಥಿತಿ ಕುರಿತು ಸ್ಥೂಲ ಮಾಹಿತಿ ಪಡೆದುಕೊಳ್ಳಲಿದೆ. 

    ಬಳಿಕ ಮಂಗಳವಾರ 8 ರಂದು ಈ ತಂಡ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ನೆರೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ. ಕೊಡಗು, ವಿಜಯಪುರ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಿಗೆ ತೆರಳಿ ವಸ್ತುಸ್ಥಿತಿ ಮಾಹಿತಿ ಸಂಗ್ರಹಿಸಲಿದೆ. ಬಳಿಕ ಕೇಂದ್ರಕ್ಕೆ ಸಮಗ್ರ ವರದಿಸಲ್ಲಿಸಲಿದೆ.

   ಕಂದಾಯ ಸಚಿವ ಆರ್. ಅಶೋಕ್ ಅವರು ಇದೇ 9 ರಂದು ಕೇಂದ್ರ ತಂಡದ ಜತೆ ಸಭೆ ನಡೆಸಲಿದ್ದು, ನೆರೆ ಹಾನಿ ಕುರಿತು ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ರಾಜ್ಯದಲ್ಲಿ 4800 ಕೋಟಿ ನಷ್ಟವಾಗಿದ್ದು, ಹಾನಿ ಕುರಿತು ಕೇಂದ್ರಕ್ಕೆ ಪ್ರಾತ್ಯಕ್ಷಿಕೆ ಮೂಲಕ ಮನವರಿಕೆ ಮಾಡಿಕೊಡಲಿದೆ.

   ಈ ಮಧ್ಯೆ ಕೇಂದ್ರ ಸರ್ಕಾರ ಎರಡನೇ ಕಂತಿನಲ್ಲಿ ರಾಜ್ಯಕ್ಕೆ 295 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಪರಿಹಾರ ಕಾರ್ಯಕ್ಕೆ ನೆರವಾಗುವ ಉದ್ದೇಶದಿಂದ 9 ಎನ್.ಡಿ.ಆರ್.ಎಫ್. ತಂಡಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap