ಕುಣಿಗಲ್
ಪದವಿಧರ ಉದ್ಯೋಗಿಗಳು ನಿರುದ್ಯೋಗಿಗಳಾಗಿ ಸಂಕಷ್ಟಕ್ಕೆ ಸಿಲುಕಲು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ತಪ್ಪು ನಿರ್ಧಾರಗಳೇ ಕಾರಣ ಎಂದು ಆಗ್ನೇಯ ಪದವಿಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಆರೋಪಿಸಿದರು.
ಪಟ್ಟಣದ ದಿಶಾ ಪಾರ್ಟಿ ಹಾಲ್ನಲ್ಲಿ ಗುರುವಾರ ನಡೆದ ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರದ ಜಿಎಸ್ಟಿ, ನೋಟು ಅಮಾನಿಕರಣದಂತಹ ಯೋಜನೆಗಳಿಂದ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಖಾಸಗಿ ಕಾರ್ಖಾನೆಗಳು ಕಂಪನಿಗಳು ಆರ್ಥಿಕ ಸಂಕಷ್ಟದಿಂದ ನಲುಗಿ ಬಾಗಿಲು ಮುಂಚಿಕೊಂಡ ಪರಿಣಾಮ ಲಕ್ಷಾಂತರ ಮಂದಿ ಪದವಿಧರರು ಉದ್ಯೋಗ ಇಲ್ಲದೇ ಮನೆ ಸೇರಿಕೊಂಡು ಜೀವನ ನಡೆಸುವುದಕ್ಕು ಕಷ್ಟಪಡುತ್ತಿದ್ದಾರೆ ಎಂದರು.
ಕೇಂದ್ರ ಸರಕಾರ ಉದ್ಯೋಗ ಸೃಷ್ಠಿಸಿ ಎಲ್ಲಾ ಯುವಕರಿಗೆ ಪದವಿಧರರಿಗೆ ಉದ್ಯೋಗ ನೀಡುವುದಾಗಿ ಮಾತು ಕೊಟ್ಟಿತ್ತು. ಈಗ ಉದ್ಯೋಗ ನೀಡುವುದಿರಲಿ ಇರುವ ಉದ್ಯೋಗವನ್ನೇ ಕಳೆದುಕೊಳ್ಳುವಂತೆ ಮಾಡಿದೆ ಎಂದು ಆರೋಪಿಸಿದರು.ಎನ್ಪಿಎಸ್ ಯೋಜನೆಯಿಂದ ಲಕ್ಷಾಂತರ ಮಂದಿ ನೌಕರರು ತಮ್ಮ ನಿವೃತ್ತಿ ನಂತರ ಪಿಂಚಣಿ ಪಡೆಯಲು ಸಾಧ್ಯವಾಗದೇ ಪರಿತಪಿಸುವಂತಾಗಿದೆ. ಈ ಸಂಬಂಧ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸಮಿತಿ ರಚಿಸಿದ್ದರು ಸಮಿತಿ ವರದಿ ನೀಡುವ ಮುನ್ನವೇ ಸರಕಾರ ಬಿದ್ದು ಬಿಜೆಪಿ ಅಧಿಕಾರಿಕ್ಕೆ ಬಂದಿದೆ. ಎನ್ಪಿಎಸ್ ನೌಕರರ ಸಹಾಯಕ್ಕೆ ಬರಲು ಬಿಜೆಪಿ ಸರಕಾರಕ್ಕೆ ಇಚ್ಚಾಶಕ್ತಿ ಇಲ್ಲ.
ಆದರೇ ಎನ್ಪಿಎಸ್ ನೌಕರರ ಹಿತ ಹಾಗೂ ಎಲ್ಲಾ ಶಿಕ್ಷಕರ ವೃಂದ ಸೇರಿದಂತೆ ಪದವಿಧರರ ಹಿತ ರಕ್ಷಣಗೆ ಪಣತೊಟ್ಟು ಹೋರಾಟ ಮಾಡುತ್ತೇನೆ. ಈ ಸಂಬಂದ ಆಗ್ನೇಯ ಪದವಿಧರ ಮತದಾರ ಬಂದುಗಳು ತಮ್ಮ ಮತ ನೀಡಿ ನನ್ನನ್ನು ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ ಡಿ.ನಾಗರಾಜಯ್ಯ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಅವರು ಸರಳ ಸಜ್ಜನಿಕೆಯ ಪ್ರಮಾಣಿಕ ವ್ಯಕ್ತಿಯಾಗಿದ್ದು ಪದವಿಧರರು ಹಾಗೂ ಶಿಕ್ಷಕ ವರ್ಗಕ್ಕೆ ಕಳೆದ ಅರು ವರ್ಷದ ಅವರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ . ಚೌಡರೆಡ್ಡಿ ಅವರಿಗೆ ಐದು ಜಿಲ್ಲೆಗಳಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳಜಗಳದಿಂದ ಚೌಡರೆಡ್ಡಿ ಕೇವಲ ಜೆಡಿಎಸ್ ಅಭ್ಯರ್ಥಿ ಮಾತ್ರವಾಗದೇ ಸರ್ವ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಅವರ ಗೆಲವು ಸತ ಸಿದ್ದ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಬೆಮಲ್ ಕಾಂತರಾಜು, ಅಪ್ಪಾಜಿಗೌಡ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎನ್. ಜಗದೀಶ್, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಕೆ.ಎಲ್.ಹರೀಶ್, ತಾ.ಪಂ ಮಾಜಿ ಸದಸ್ಯ ಶಿವರಾಜು, ಮುಖಂಡರಾದ ತರೀಕೆರೆ ಪ್ರಕಾಶ್, ರಂಗಸ್ವಾಮಿ, ದೀಪು ಮುಂತಾದವರು ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
