ಬೆಂಗಳೂರು
ರಾಜ್ಯದೆಲ್ಲೆಡೆ ಕೊರೊನಾ ವೈರಸ್ ಭೀತಿಯಿಂದ ಪಾರಾಗಲು ಮತ್ತು ಸುರಕ್ಷಿತವಾಗಿರಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಕೆಲವು ಭಾಗಗಳ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಬೇಕು ಎಂದು ಆದೇಶ ನೀಡಿದರು ಅದಕ್ಕೆ ಕವಡೆ ಕಾಸಿನ ಕಿಮ್ಮತ್ತನ್ನು ನೀಡದೆ ಶಾಲೆಗಳನ್ನು ತರೆದು ಮಕ್ಕಳ ಜೀವದ ಜೊತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯವರು ಆಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ. ”ಸರ್ಕಾರದ ಆದೇಶ ಪಾಲಿಸುವುದು ಶಾಲೆಗಳ ಕರ್ತವ್ಯ. ಆದರೆ, ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಆದೇಶಕ್ಕೆ ಗೌರವ ನೀಡದೆ, ತಮ್ಮದೆ ಸಾಮ್ರಾಜ್ಯ ಕಟ್ಟಿಕೊಂಡಿವೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ನಿಯಮ ತಂದಿದೆ. ‘ಮಕ್ಕಳ ಹಿತಕ್ಕಿಂತ ನಿಮ್ಮ ಪ್ರತಿಷ್ಟೆ ಮುಖ್ಯವಲ್ಲ’ ಎಂದು ಸುರೇಶ್ ಕುಮಾರ್ ಖಾಸಗಿ ಶಾಲೆಯ ಆಡಳಿತ ಮಂಡಳಿಗಳಿಗೆ ಕಿವಿಮಾತು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/suresh-kumar_650x400_51425405374.gif)