ಬೆಂಗಳೂರು
ಸಮ್ಮಿಶ್ರ ಸರ್ಕಾರದ ಬಾಂಧವ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ತಾಳಿ ಕಟ್ಟಿದ್ದು, ಇದೀಗ ಬಿಜೆಪಿ ನಾಯಕರು ತಾಳಿ ಕಟ್ಟಿದ ಹೆಣ್ಣನ್ನು ಅಪಹರಣ ಮಾಡಿ ಕರೆತರುವ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದ್ದಾರೆ.
ಸಂಕ್ರಾಂತಿ ನಂತರ ಸಮ್ಮಿಶ್ರ ಸರ್ಕಾರಕ್ಕೆ ಕಂಟಕವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಇಬ್ರಾಹಿಂ, ಬಿಜೆಪಿಯವರು ಆಶಾವಾದಿಗಳಾದರೆ ತಪ್ಪೇನಿಲ್ಲ. ಆಸೆ ಇಟ್ಟುಕೊಳ್ಳುವುದ ಪ್ರತಿಯೊಬ್ಬರ ಹಕ್ಕು. ಆದರೆ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವುದು ತಪ್ಪು ಎಂದರು.
ನಮ್ಮ ಶಾಸಕರನ್ನು ಬಿಜೆಪಿಯವರು ತಮ್ಮ ಶಾಸಕರು ಎಂದು ಬಿಂಬಿಸುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದು ಒಳ್ಳಯೆ ಬೆಳವಣಿಗೆಲ್ಲ. ಹಿಂದೆ ಮಾಡಿದ ತಪ್ಪನ್ನೇ ಬಿಜೆಪಿ ಈಗ ಮತ್ತೆ ಮಾಡುತ್ತಿರುವುದು ಒಳ್ಳೆಯ ಸಂಪ್ರದಾಯವಲ್ಲ ಎಂದು ಇಬ್ರಾಹಿಂ ಟೀಕಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
