ಭಿನ್ನ ಮತ ಶಮನಕ್ಕೆ ಸಚಿವರು ಮತ್ತು ಡಿಸಿಎಂಗಳಿಗೆ ಸಿಎಂ ಸೂಚನೆ..!

ಬೆಂಗಳೂರು:

     ಕ್ಷೇತ್ರಗಳ ಕೆಲಸ ಆಗುತ್ತಿಲ್ಲ ಎನ್ನುವ ಕಾರಣ ಮುಂದಿಟ್ಟು ನಿನ್ನೆ ರಾತ್ರಿ ಕೆಲ ಶಾಸಕರು ನಡೆಸಿದ ಸಭೆಯಂತಹ ಭಿನ್ನರಾಗದ ಚಟುವಟಿಕೆಯಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚೆತ್ತುಕೊಂಡಿದ್ದಾರೆ. ಡಿಸಿಎಂ ಮತ್ತು ಸಚಿವರುಗಳಿಗೆ ಸ್ಥಳೀಯ ಸಮಸ್ಯೆ ಪರಿಶೀಲಿಸುವಂತೆ ಆದೇಶದ ಮೂಲಕ ಸೂಚನೆ ನೀಡಿದ್ದಾರೆ.

   ಸಚಿವರ ಆಪ್ತ ಸಿಬ್ಬಂದಿಯು ಶಾಸಕರುಗಳೊಂದಿಗೆ ಹಾಗೂ ಪಕ್ಷದ ಜಿಲ್ಲಾ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಚಿವರ ಎಲ್ಲ ಪ್ರವಾಸ ಕಾರ್ಯಕ್ರಮವನ್ನು ಎಲ್ಲರ ಗಮನಕ್ಕೆ ತರುವುದು ಮತ್ತು ಕ್ಷೇತ್ರಗಳ ಕೆಲಸ ಕಾರ್ಯ ಹಾಗೂ ಸಾರ್ವಜನಿಕ ಕುಂದುಕೊರತೆ ಬಗ್ಗೆ ಪರಿಶೀಲಿಸಿ ಇವುಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
    ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ್ದ 8ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ದೂರು ಕೊಟ್ಟಿದ್ದರು. ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಆಗುತ್ತಿಲ್ಲ, ಕ್ಷೇತ್ರದ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿದ್ದರು. ಈ ಬಗ್ಗೆ ಸಿಎಂ ಜೊತೆ ಮಾತುಕತೆ ನಡೆಸಿ ಸರಿಪಡಿಸುವ ಭರವಸೆಯನ್ನು ಕಟೀಲ್ ನೀಡಿದ್ದರು. ಅದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರು ಸಚಿವರಿಗೆ ಪತ್ರ ಬರೆದು ಜಿಲ್ಲಾ ಪ್ರವಾಸದ ವೇಳೆ ಶಾಸಕರ ಅಹವಾಲು ಆಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap