ಅಂಡಮಾನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರಿಗೆ ಮುಖ್ಯಮಂತ್ರಿಗಳ ಸಹಾಯಹಸ್ತ…!!!

ಬೆಂಗಳೂರು

     ಪ್ರವಾಸದ ನಿಮಿತ್ತ ಅಂಡಮಾನ್ ಮತ್ತು ನಿಕೋಬಾರ್ ಗೆ ತೆರಳಿ ವಿಮಾನ ಲಭ್ಯತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 50 ಮಂದಿ ಕನ್ನಡಿಗರಿಗೆ ರಾಜ್ಯ ಸರ್ಕಾರದ ಮಧ್ಯಪ್ರವೇಶದಿಂದ ಸಮಸ್ಯೆ ಬಗೆಹರಿದಿದೆ.ಪ್ರವಾಸದಲ್ಲಿದ್ದ ಮೂಡಿಗೆರೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶಶಿಕಲಾ ಅವರು ತಮ್ಮ ಸಮಸ್ಯೆಯನ್ನು ದೂರವಾಣಿ ಮೂಲಕ ಇಂದು ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತಂದಿದ್ದರು.

      ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಕೂಡಲೇ ಪರಿಸ್ಥಿತಿಯನ್ನು ನಿಭಾಯಿಸಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿ ಹಾಗೂ ದೆಹಲಿಯಲ್ಲಿರುವ ನಿವಾಸಿ ಆಯುಕ್ತರಿಗೆ ಸೂಚಿಸಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ದೆಹಲಿಯ ನಿವಾಸಿ ಆಯುಕ್ತರು ಸಮಸ್ಯೆಯನ್ನು ಬಗೆಹರಿಸಿದ್ದು, ನಾಳೆ ಬೆಳಗಿನ ವಿಮಾನದಲ್ಲಿ ಬೆಂಗಳೂರಿಗೆ ಹಿಂದಿರುಗಲು ವ್ಯವಸ್ಥೆ ಕಲ್ಪಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap